ಬೆಳಾಲು : ಉತ್ತಮ ಕನ್ನಡ ಶಾಲೆ ಪುರಸ್ಕಾರ ಪಡೆದ ಬೆಳಾಲು ಶ್ರೀ ಧ. ಮ. ಪ್ರೌಢ ಶಾಲೆಯ ಸಾಧನೆಯನ್ನು ಗುರುತಿಸಿ ನ.17 ರಂದು ಬೆಳಾಲು ಗ್ರಾಮ ಪಂಚಾಯತ್ ನ ಗ್ರಾಮ ಸಭೆಯಲ್ಲಿ ನಡೆದ ಗೌರವಿಸಲಾಯಿತು.
ಮುಖ್ಯೋಪಾಧ್ಯಾಯರು ಮಂಗಳೂರಿನಲ್ಲಿ ಶಿಕ್ಷಣ ಇಲಾಖೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕಾರಣ ಅವರ ಅನುಪಸ್ಥಿತಿಯಲ್ಲಿ, ಸಹ ಶಿಕ್ಷಕಿ ವಾರಿಜ ರವರನ್ನು, ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿರುವ ಸುಲೈಮಾನ್ ಬೆಳಾಲು ಸಮ್ಮುಖದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ, ಉಪಾಧ್ಯಕ್ಷ ಸತೀಶ್ ಎಳ್ಳುಗದ್ದೆ ಸದಸ್ಯರು, ಪ. ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್ ಕಾರ್ಯದರ್ಶಿ ಮೋಹನ್ ಬಂಗೇರ, ಇಲಾಖೆಯ ಅಧಿಕಾರಿಗಳು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.