ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿದ ಮಾಜಿ ಸಚಿವ ಜಿ.ಟಿ ದೇವೇಗೌಡ

0

ಕೊಕ್ಕಡ: ಮಾಜಿ ಕಂದಾಯ ಸಚಿವ ಹಾಗೂ ಮೈಸೂರು ಚಾಮುಂಡೇಶ್ವರಿ ವಿಧಾನ ಸಭಾ ಕ್ಷೇತ್ರದ ಹಾಲಿ ಶಾಸಕ ಜಿ.ಟಿ ದೇವೇಗೌಡ ದಂಪತಿಗಳು ನ.21 ರಂದು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ  ಭೇಟಿ ನೀಡಿ  ಗಣಪತಿ ಹವನ ಹಾಗೂ ರಂಗಪೂಜೆ ಸೇವೆಯನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಸುಬ್ರಹ್ಮಣ್ಯ ಎಡಪಡಿತ್ತಾಯ ದಂಪತಿಗಳು , ರತ್ನಾಕರ ಪಾಂಗಣ್ಣಾಯ ಮೀಯಾಳ, ಗಣೇಶ್ ಕೊಕ್ಕಡ  ಉಪಸ್ಥಿತರಿದ್ದರು.    ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ಪುರಂದರ .ಕೆ ಕಡೀರ ಮತ್ತು ದೇವಸ್ಥಾನದ ಸಿಬ್ಬಂದಿ ವರ್ಗದವರು ಸಹಕರಿಸಿದರು.

LEAVE A REPLY

Please enter your comment!
Please enter your name here