ಧರ್ಮಸ್ಥಳ: ಧರ್ಮಸ್ಥಳ ಭಾಗದ ಕಾಂಗ್ರೆಸ್ ಮುಖಂಡ, ಮಾನ್ಯ ನಗರಾಭಿವೃದ್ಧಿ ಸಚಿವರಾದ ಬೈರತಿ ಬಸವರಾಜ್ ಅವರ ಆಪ್ತ ಸ್ನೇಹಿತ ಹಾಗೂ ಧರ್ಮಸ್ಥಳ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಅಧ್ಯಕ್ಷ, ಧರ್ಮಸ್ಥಳ ಗ್ರಾ.ಪಂ ಮಾಜಿ ಅಧ್ಯಕ್ಷ ಚಂದನ್ ಕಾಮತ್ ಅವರು ನ.21ರಂದು ಬೈರತಿ ಬಸವರಾಜ್ ಅವರ ಆಶಯದಂತೆ ಅವರ ಸಮ್ಮುಖದಲ್ಲಿ ಭಾರತೀಯ ಜನತಾ ಪಾರ್ಟಿಗೆ ಸೇರಿಕೊಂಡರು.
ಈ ವೇಳೆ ಚಂದನ್ ಕಾಮತ್ ಅವರನ್ನು ಆತ್ಮೀಯವಾಗಿ ಪಕ್ಷಕ್ಕೆ ಸೇರ್ಪಡೆ ಮಾಡಲಾಯಿತು.