ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರ್ ಇಲ್ಲಿ ನ.22 ರಂದು ನಡೆದ ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿ ಇದರ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸೇಕ್ರೆಡ್ ಹಾರ್ಟ್ ಸಮೂಹ ಸಂಸ್ಥೆಗಳ ಸಂಚಾಲಕರಾದ ರೇ. ಫಾ. ಬೇಸಿಲ್ ವಾಸ್ ರವರು ಮಾತನಾಡುತ್ತಾ ವಿದ್ಯಾರ್ಥಿಗಳು ಸೇವಾ ಮನೋಭಾವನೆಯನ್ನು ಬೆಳಸಿಕೊಳ್ಳಬೇಕು ಆ ಮೂಲಕ ನಾಯಕತ್ವ ಗುಣ ಬೆಳೆಯುತ್ತದೆ ಎಂದು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಜೋಸೆಫ್ ಎನ್. ಎಮ್ ರವರು ವಿದ್ಯಾರ್ಥಿ ಪ್ರತಿನಿಧಿಗಳಿಗೆ ಪ್ರಮಾಣ ವಚನ ಭೋದಿಸಿ ಜೀವನದಲ್ಲಿ ಶಿಸ್ತು ಅಂತ್ಯಂತ ಮುಖ್ಯ ಎಂದು ತಿಳಿಸಿದರು.
ವೇದಿಕೆಯಲ್ಲಿ ಪ್ರೊ. ಈಶ್ವರ ಗೌಡ ಮತ್ತು ಪ್ರೊ. ಪೌಲ್ ಮಿನೆಜಸ್ ಉಪಸ್ಥಿತರಿದ್ದರು.
ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಪ್ರೊ. ಪ್ರಕಾಶ್ ಕ್ರಮದಾರಿ ಸ್ವಾಗತಿಸಿ ವಿದ್ಯಾರ್ಥಿ ಸಂತೋಷ್ ಸೆರಾವೋ ವಂದಿಸಿದರು ಶಾಹಿದ್ ಆಫ್ರಿದ್ ನಿರೂಪಿಸಿದರು.