ಚಾಲಕನ  ನಿಯಂತ್ರಣ ತಪ್ಪಿ ಅಂಗಡಿಗೆ ಡಿಕ್ಕಿಯಾದ ಬಸ್: ಅಂಗಡಿಯಲ್ಲಿದ್ದ ಜನರನ್ನು ಬಚಾವ್ ಮಾಡಲು ಹೋಗಿ ನಿಂತಿದ್ದ ಜೀಪಿಗೆ ಡಿಕ್ಕಿ ಹೊಡೆದ ಬಸ್ 

0

ನಿಡ್ಲೆ: ಧರ್ಮಸ್ಥಳದ ಕುದ್ರಾಯದಲ್ಲಿ ನ.23ರಂದು ಸಂಜೆ ನಡೆದ ಭೀಕರ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಏಳು ಮಂದಿಗೆ ಗಂಭೀರ ಗಾಯಗೊಮಡಿರುವ ಘಟನೆ ನಡೆದಿದೆ.

ಮಂಡ್ಯ ಚೆನ್ನಸಾಂದ್ರದ ಮಹಾದೇವ(63) ಸಾವನ್ನಪ್ಪಿದವರು.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುತ್ತಿದ್ದ ಮಂಡ್ಯದ 10 ಮಂದಿಯ ಕುಟುಂಬ ನಿಡ್ಲೆ ಗ್ರಾಮದ ಕುದ್ರಾಯದಲ್ಲಿ ಬೊಲೇರೋ ವಾಹನವನ್ನು ರಸ್ತೆಯ ಬದಿಯಲ್ಲಿ ನಿಲ್ಲಿಸಿ ಇಳಿದು ಅಂಗಡಿಗೆ ಹೋಗುತ್ತಿದ್ದರು. ಈ ವೇಳೆ ಧರ್ಮಸ್ಥಳ ಡಿಪೋದಿಂದ ಮೈಸೂರಿಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿಸಿ ಬಸ್ ನಿಂತಿದ್ದವರಿಗೆ ಹಾಗೂ ಬೊಲೇರೋ ವಾಹನಕ್ಕೆ ಡಿಕ್ಕಿ ಹೊಡೆದಿದೆ.

ಐವರು ಮಹಿಳೆಯರು, ಓರ್ವ ಪುರುಷ, ಒಂದು ಮಗುವಿಗೆ ಗಂಭೀರ ಗಾಯವಾಗಿದ್ದು ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here