ಹುಪ್ಪ ಅಂಗವಾಡಿ ಕೇಂದ್ರದಲ್ಲಿ ಬಾಲ ಮೇಳ ಕಾರ್ಯಕ್ರಮ

0

ಪಾರೆಂಕಿ :  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,  ಗ್ರಾಮ ಪಂಚಾಯತ್ ಮಡಂತ್ಯಾರು, ಹುಪ್ಪ ಅಂಗವಾಡಿ ಕೇಂದ್ರದಲ್ಲಿ ಬಾಲ ಮೇಳ ಕಾರ್ಯಕ್ರಮ ನ 19ರಂದು ಜರುಗಿತು.

ಪುಟಾಣಿ ಮಕ್ಕಳಿಗೆ ಛದ್ಮವೇಷ ಹಾಗೂ ನೃತ್ಯ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾರೆಂಕಿ ಮಹಿಷಮರ್ಧಿನಿ ದೇವಸ್ಥಾನದ ಪ್ರಧಾನ ಅರ್ಚಕರು ಶ್ರೀಧರ್ ರಾವ್,  ಮಡಂತ್ಯಾರು ಗ್ರಾಮ ಪಂಚಾಯತ್ ಸದಸ್ಯರಾದ ವಿಶ್ವನಾಥ ಪೂಜಾರಿ ಹಾರಬೆ, ಮೋಹಿನಿ ಬಂಗೇರಕಟ್ಟೆ, ಕಿಶೋರ್ ಕುಮಾರ್ ಮೂಡಯೂರು, ಆಶಾಕಾರ್ಯಕರ್ತೆ ಸವಿತಾ ಮಾಲಾಡಿ, ಹೇಮಲತಾ ಪಾರೆಂಕಿ ಉಪಸ್ಥಿತರಿದ್ದರು.

ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಪ್ರವೀಣ್ ಪ್ರಕಾಶ್ ಪಾಯಿಸ್ ಕಾರ್ಯಕ್ರಮ ನಿರೂಪಿಸಿದರು. ಅಂಗನವಾಡಿ ಕಾರ್ಯಕರ್ತೆ ಲೀಲಾವತಿ ಸ್ವಾಗತಿಸಿ, ಅಂಗನವಾಡಿ ಸಹಾಯಕಿ ಉಷಾ ವರದಿ ಓದಿದರು. ಆಶಾಕಾರ್ಯಕರ್ತೆ ಹೇಮಲತಾ ಧನ್ಯವಾದ ಹೇಳಿದರು.

LEAVE A REPLY

Please enter your comment!
Please enter your name here