ಪ್ರವೀಣ್ ನೆಟ್ಟಾರ್ ಷಡ್ಯಂತ್ರಕ್ಕೆ ಬಲಿಯಾಗಿ ಪ್ರಾಣ ತ್ಯಾಗ ಮಾಡಿದ್ದಾರೆ

0

 

ಅವರ ಮನೆಯವರಿಗೆ ನನ್ನ ಕಚೇರಿಯಲ್ಲೇ ಕೆಲಸ ಕೊಡಿಸುವೆ

ಜನ ಸ್ಪಂದನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ

ಪ್ರವೀಣ್ ನೆಟ್ಟಾರ್ ಮನೆಯವರಿಗೆ ತನ್ನ ಕಚೇರಿಯಲ್ಲೇ ಉದ್ಯೋಗ ಕೊಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಇಂದು ನಡೆದ ಬಿಜೆಪಿ ಜನ ಸ್ಪಂದನಾ ಸಮಾವೇಶದಲ್ಲಿ ಮಾತನಾಡುವ ವೇಳೆ ಈ ವಿಚಾರ ಪ್ರಸ್ತಾಪಿಸಿದ ಮುಖ್ಯಮಂತ್ರಿಯವರು, ಪ್ರವೀಣ್ ನೆಟ್ಟಾರ್ ನಮ್ಮ ಯುವ ಮೋರ್ಚಾ ಕಾರ್ಯಕರ್ತರು. ಅವರು ಷಡ್ಯಂತ್ರಕ್ಕೆ ಬಲಿಯಾಗಿ ತಮ್ಮ ಪ್ರಾಣತ್ಯಾಗವನ್ನು ಮಾಡಿದ್ದಾರೆ. ಅವರ ಮನೆಯವರಿಗೆ ನಾನು ನನ್ನ ಕಚೇರಿಯಲ್ಲಿನೇ ಕೆಲಸ ಕೊಡುವಂತಹ ಆಜ್ಞೆಯನ್ನು ಮಾಡುತ್ತೇನೆ ಎಂದರು.

ಮುಖ್ಯಮಂತ್ರಿಗಳ ಘೋಷಣೆ ಕುರಿತಂತೆ ಪ್ರವೀಣ್ ಪತ್ನಿ ನೂತನ ಅವರನ್ನು “ಸುದ್ದಿ” ಸಂಪರ್ಕಿಸಿದಾಗ, ” ಈ ವಿಚಾರ ಮಾಧ್ಯಮಗಳ ಮೂಲಕವಷ್ಟೇ ತಿಳಿದಿದೆಯೇ ಹೊರತು ಬೇರೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. ಹಾಗಾಗಿ ಈ ಹಂತದಲ್ಲಿ ಯಾವುದೇ ಪ್ರತಿಕ್ರಿಯೆ ನೀಡುವುದು ಸರಿಯಾಗುವುದಿಲ್ಲ” ಎಂದು ಹೇಳಿದರು.

LEAVE A REPLY

Please enter your comment!
Please enter your name here