Site icon Suddi Belthangady

ಬೆಳ್ಳಾರೆಯ ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ ಆರೋಪ ; ಬಂಧಿತ ಆರೋಪಿಗೆ ಜಾಮೀನು

 

ಬೆಳ್ಳಾರೆಯ ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಆರೋಪಿ ಅಬ್ದುಲ್ ಸಫ್ರಿಜ್‌ನನ್ನು ಬಂಧಿಸಲಾಗಿದ್ದು, ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ.

ಹಿಂದೂ ಸಂಘಟನೆಯ ಕಾರ್ಯಕರ್ತ ಹಾಗೂ ಬೆಳ್ಳಾರೆಯ ಅಮ್ಮು ರೈ ಕಾಂಪ್ಲೆಕ್ಸ್ ನ ಮ್ಯಾನೇಜರ್ ಪ್ರಶಾಂತ್ ಪೂಂಜ ಅವರಿಗೆ, ಪ್ರವೀಣ್ ನೆಟ್ಟಾರ್ ಕೊಲೆ ಆರೋಪಿ ಶಫೀಕ್ ತಮ್ಮ ಅಬ್ದುಲ್ ಸಫ್ರಿಜ್ ಜೀವ ಬೆದರಿಕೆ ಒಡ್ಡಿರುವುದಾಗಿ ನಿನ್ನೆ ಪೊಲೀಸ್ ದೂರು ನೀಡಲಾಗಿತ್ತು.  ಈ ಮಾಹಿತಿ ತಿಳಿಯುತ್ತಲೇ ಹಿಂದೂ ಸಂಘಟನೆಯ ಕಾರ್ಯಕರ್ತರು ಠಾಣೆ ಮುಂದೆ ಜಮಾಯಿಸಿದರು. ಸಫ್ರೀಜ್‌ನನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದರು. ಬಂದ್ ಕರೆಯ ಎಚ್ಚರಿಕೆಯನ್ನೂ ನೀಡಲಾಯಿತು. ಪೊಲೀಸ್ ಅಧಿಕಾರಿಗಳಿಂದ ಬಂಧನದ ಭರವಸೆ ಹಿನ್ನೆಲೆಯಲ್ಲಿ ಕಾರ್‍ಯಕರ್ತರು ತೆರಳಿದರು.
ಇದೊಂದು ಅಸಂಜ್ಞೆಯ ಅಪರಾಧವಾಗಿರುವುದರಿಂದ ಪ್ರಕರಣ ದಾಖಲಿಸುವ ಅನುಮತಿ ನೀಡುವಂತೆ ನ್ಯಾಯಾಲಯಕ್ಕೆ ಪೊಲೀಸರು ಕೋರಿಕೆ ಪತ್ರ ಸಲ್ಲಿಸಿದರು. ನ್ಯಾಯಾಲಯದ ಅನುಮತಿಯಂತೆ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಯಿತು. ಬಳಿಕ ಪೊಲೀಸರು ಬಜ್ಪೆಯಲ್ಲಿ ಆರೋಪಿಯನ್ನು ಬಂಧಿಸಿ ಕರೆತಂದರು. ಇಂದು ಆತನನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಯಿತು.

Exit mobile version