Site icon Suddi Belthangady

ಅ.22: ಮೂರ್ಜೆ (ಮೂರ್ಕಜೆ) ನಂದರವಂಶ ಒಕ್ಕಲಿಗ ಗೌಡ ತರವಾಡು ಟ್ರಸ್ಟ್ ವತಿಯಿಂದ ಗುರುವಂದನಾ – ಕುಟುಂಬ ಸಮ್ಮಿಲನ ಕಾರ್ಯಕ್ರಮ

 

ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಾಲಯದಲ್ಲಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ ತಾಲೂಕಿನ ವಿಟ್ಲಪಡ್ನೂರು ಗ್ರಾಮದ ಕೊಡಂಗಾಯಿ ಮೂರ್ಜೆ (ಮೂರ್ಕಜೆ) ನಂದರವಂಶ ಒಕ್ಕಲಿಗ ಗೌಡ ತರವಾಡು ಟ್ರಸ್ಟ್ ವತಿಯಿಂದ ಆದಿಚುಂಚನಗಿರಿ ಮಠದ ಪರಮಪೂಜ್ಯ ನಿರ್ಮಲಾನಂದ ಭಾರತಿ ಸ್ವಾಮೀಜಿಗಳಿಗೆ ಗುರುವಂದನಾ – ಕುಟುಂಬ ಸಮ್ಮಿಲನ ಕಾರ್ಯಕ್ರಮವು ಅ.22ರಂದು ವಿಟ್ಲದ ಅಕ್ಷಯ ಸಭಾಭವನದಲ್ಲಿ ಜರುಗಲಿದ್ದು, ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಸೆ.16ರಂದು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಾಲಯದಲ್ಲಿ ಬಿಡುಗಡೆಗೊಳಿಸಲಾಯಿತು.
ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಾಲಯದ ಆಡಳಿತ ದರ್ಮದರ್ಶಿ ಕೆ. ಕೃಷ್ಣಯ್ಯ ಅವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ, ಶುಭಹಾರೈಸಿದರು.
ಈ ಸಂದರ್ಭದಲ್ಲಿ ಮೂರ್ಜೆ (ಮೂರ್ಕಜೆ) ನಂದರವಂಶ ಒಕ್ಕಲಿಗ ಗೌಡ ತರವಾಡು ಟ್ರಸ್ಟಿನ ಗೌರವಾಧ್ಯಕ್ಷ ಕೃಷ್ಣಪ್ಪ ಗೌಡ ನೈಪಾಡಿ, ಅಧ್ಯಕ್ಷ ಕೆ.ಎಸ್. ಗೋಪಾಲಕೃಷ್ಣ ಗೌಡ ಮೂರ್ಜೆ, ಪ್ರಧಾನ ಕಾರ್ಯದರ್ಶಿ ಪಿ.ಯಂ. ಹರೀಶ್ ಮೂರ್ಜೆ, ಟ್ರಸ್ಟಿಗಳಾದ ಪಿ.ಯಂ. ರಾಧಾಕೃಷ್ಣ ಮೂರ್ಜೆ, ಹೊನ್ನಯ್ಯ ಗೌಡ ರಾಯಿ -ಬಂಟ್ವಾಳ, ಸದಸ್ಯರುಗಳಾದ ಗಿರಿಧರ ಗೌಡ ಮೂರ್ಜೆ, ಬಾಲಕೃಷ್ಣ ಗೌಡ ಮೂರ್ಜೆ ಪೆರಿಯಡ್ಕ, ಪದ್ಮನಾಭ ಗೌಡ ಮೂರ್ಜೆ ದೇವಸ್ಯ -ವಿಟ್ಲ, ಕೇಶವ ಗೌಡ ಕೊಡಿಂಜ, ಯಶೋಧರ ಗೌಡ ಕುಂಜಾರು, ಕೂಸಪ್ಪ ಗೌಡ ಪರಮಾರು ಸೇರಿದಂತೆ ತರವಾಡು ಟ್ರಸ್ಟ್‌ನ ಪದಾಧಿಕಾರಿಗಳು ಉಪಸ್ಥಿತರಿದ್ದರು.

Exit mobile version