ಸಹಕಾರಿ ರತ್ನ ರಾಜ್ಯ ಪ್ರಶಸ್ತಿ ಪುರಸ್ಕೃತ ಕೆ. ಸೀತಾರಾಮ ರೈ ಸವಣೂರುರವರಿಗೆ ಯೇನೆಕಲ್ಲು ಸಹಕಾರಿ ಸಂಘದಿಂದ ಸನ್ಮಾನ

0

 

ಯೇನೆಕಲ್ಲು ಸಹಕಾರಿ ಸಂಘದಲ್ಲಿ ಮುಖ್ಯ ಕಾರ್ಯನಿರ್ಹಣಾಧಿಕಾರಿಯಾಗಿ ಸೇವೆ ಸಲ್ಲಿಸಿದ ಕೆ. ಸೀತಾರಾಮ ರೈ ಸವಣೂರುರವರಿಗೆ ಅಭಿನಂದನಾ ಕಾರ್ಯಕ್ರಮ ಸಂಘದ ಸಭಾಭವನದಲ್ಲಿ ಸೆ. 16ರಂದು ಜರಗಿತು.


ಯೇನೆಕಲ್ಲು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಭವಾನಿಶಂಕರ ಪೂಂಬಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸನ್ಮಾನಿತರಿಗೆ ಶುಭ ಹಾರೈಸಿದರು. ಭಾರತೀಯ ಜೇಸೀಸ್ ನ ವಲಯ ತರಬೇತುದಾರ ಶಶಿಧರ ಪಳಂಗಾಯ ಅಭಿನಂದನಾ ಮಾತುಗಳನ್ನಾಡಿದರು. ಸಂಘದ ಮಾಜಿ ಅಧ್ಯಕ್ಷ ಹಿರಿಯ ಸಹಕಾರಿ ಚಂದ್ರಶೇಖರ ಮೇಲ್ನಾಡ್ ಸೀತಾರಾಮ ರೈಯವರನ್ನು ಸನ್ಮಾನಿಸಿ ಅಭಿನಂದನಾ ಮಾತುಗಳನ್ನಾಡಿದರು. ಸಂಘದ ನಿರ್ದೇಶಕರಾದ ಅಣ್ಣೋಜಿ ಗೌಡ ಕೆ, ಶ್ರೀಮತಿ ಅನಿತಾ ಪಿ.ಆರ್, ಕಿರಣ್ ಕುಮಾರ್ ಎಂ, ಕೇಶವ ಆಚಾರ್ಯ, ಶ್ರೀನಿವಾಸ ಆಚಾರ್ಯ, ಗಿರೀಶ್ ಎಂ, ಶ್ರೀಮತಿ ಯಮುನಾ ಎಸ್.ಎಲ್, ಶ್ರೀಮತಿ ವೇದಾವತಿ ಕೆ, ರಮೇಶ ಸಿ ಮತ್ತು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರತನ್ ಕೆ.ಆರ್. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷ ಭರತ್ ನೆಕ್ರಾಜೆ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ನಿರ್ದೇಶಕ ವೆಂಕಟ್ರಮಣ ಕೆ.ವಿ ವಂದಿಸಿದರು. ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಶೇಖರ್ ಕೇದಿಗೆಬನ ಕಾರ್ಯಕ್ರಮ ನಿರೂಪಿಸಿದರು. ಸಂಘದ ಸಿಬ್ಬಂದಿಗಳು ಸಹಕಾರ ನೀಡಿದರು.
ಎಸ್‌. ಎಸ್. ಎಲ್.ಸಿ. ಮತ್ತು ಪಿ.ಯು.ಸಿ.ಯಲ್ಲಿ ಅತ್ಯಂತ ಹೆಚ್ಚು ಅಂಕ ಪಡೆದ ಸಂಘದ ಸದಸ್ಯರ ಮಕ್ಕಳಿಗೆ, ಮೆಸ್ಕಾಂ ಸಿಬ್ಬಂದಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here