ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ 24. ರಂದು ರಾಷ್ಟ್ರೀಯ ಸೇವಾ ಯೋಜನೆ ದಿನವನ್ನು ಜೀವನ ಕೌಶಲ್ಯ ತರಬೇತಿಯನ್ನು ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳುವುದರ ಮೂಲಕ ಆಚರಿಸಲಾಯಿತು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಶ್ರೀಮತಿ ಸ್ವಾತಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ತರಬೇತಿಯನ್ನು ನಡೆಸಿಕೊಟ್ಟರು.
ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಶ್ರೀಮತಿ ಆರತಿ K ಸ್ವಾಗತಿಸಿದರು, ಶ್ರೀಮತಿ ನಮಿತಾ ಧನ್ಯವಾದ ಸಮರ್ಪಿಸಿದರು. ಶ್ರೀಕುಮಾರ್ ಶೇಣಿ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆಯ ಮಹತ್ವವನ್ನು ತಿಳಿಸುವುದರ ಮೂಲಕ ಕಾರ್ಯಕ್ರಮವನ್ನು ನಿರೂಪಿಸಿದರು.