ಅಕ್ಷಯ ಯುವಕ ಮಂಡಲ ನೆಟ್ಟಾರು ಹಾಗೂ ಅಕ್ಷತಾ ಮಹಿಳಾ ಮಂಡಲ ನೆಟ್ಟಾರು ಇವುಗಳ ಜಂಟಿ ಆಶ್ರಯದಲ್ಲಿ ನೆಟ್ಟಾರು ಪರಿಸರದ ಸ್ವಚ್ಛತಾ ಕಾರ್ಯವು ಅಕ್ಟೋಬರ್ 09ರಂದು ನಡೆಯಿತು. ಯುವಜನ ಸಂಯುಕ್ತ ಮಂಡಳಿ ಸುಳ್ಯ ಇದರ ಕಾರ್ಯದರ್ಶಿಗಳಾದ ಸಂಜಯ್ ನೆಟ್ಟಾರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಯುವಕ ಮಂಡಲದ ಕಾರ್ಯವನ್ನು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷರಾದ ಶ್ರೀಜಿತ್ ರೈ ಮಣಿಕ್ಕಾರ,ಮಹಿಳಾ ಮಂಡಲದ ಅಧ್ಯಕ್ಷೆ ತೇಜೇಶ್ವರಿ ನೆಟ್ಟಾರು,ಯುವಕ ಮಂಡಲ,ಮಹಿಳಾ ಮಂಡಲದ ಪದಾಧಿಕಾರಿಗಳು ಹಾಗೂ ಸದಸ್ಯರು ಹಾಜರಿದ್ದರು.ಯುವಕ ಮಂಡಲದ ಕಾರ್ಯದರ್ಶಿ ಜಯಪ್ರಕಾಶ್ ಸ್ವಾಗತಿಸಿ, ಅಧ್ಯಕ್ಷ ಶ್ರೀಜಿತ್ ರೈ ಧನ್ಯವಾದವಿತ್ತರು.ವಸಂತ ನೆಟ್ಟಾರು ಕಾರ್ಯಕ್ರಮ ನಿರೂಪಿಸಿದರು.