ಅಮರ ಪಡ್ನೂರು ಗ್ರಾಮದ ಚೂಂತಾರು ಮನೆ ವೇದ ಮೂರ್ತಿ ಚೂಂತಾರು ಲಕ್ಷ್ಮೀನಾರಾಯಣ ಭಟ್ ಇಂದು ಮುಂಜಾನೆ ನಿಧನರಾದರು. ಇವರಿಗೆ 82 ವರ್ಷ ವಯಸ್ಸಾಗಿತ್ತು.
ಮೃತರು ಪುತ್ರರಾದ ಚೊಕ್ಕಾಡಿ ಶ್ರೀರಾಮ ದೇವಾಲಯದ ಅಧ್ಯಕ್ಷ ಮಹೇಶ ಚೂಂತಾರು, ಅಮೇರಿಕಾದಲ್ಲಿ ಉದ್ಯೋಗಿಯಾಗಿರುವ ನಾಕೇಶ ಚೂಂತಾರು, ಮಂಗಳೂರಿನಲ್ಲಿ ದಂತ ವೈದ್ಯರಾಗಿರುವ ಡಾ. ಮುರಲೀಮೋಹನ್ ಚೂಂತಾರು, ಪುತ್ರಿ ಶ್ರೀಮತಿ ಗೀತಾ ಗಣೇಶ್ ಮಂಗಳೂರು ಸೇರಿದಂತೆ ಸಹೋದರರು, ಸಹೋದರಿಯರು, ಕುಟುಂಬಸ್ಥರು, ಬಂಧು ಮಿತ್ರರು ಹಾಗೂ ಅಪಾರ ಶಿಷ್ಯ ವೃಂದವನ್ನು ಅಗಲಿದ್ದಾರೆ.