Site icon Suddi Belthangady

ಏನೆಕಲ್ಲು :  ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

 

ಪಂಜ ವಲಯದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಸರಕಾರಿ ಪ್ರೌಢಶಾಲೆ ಏನೆಕಲ್ಲು ವಿನಲ್ಲಿ ನಡೆಯಿತು. ಜನಜಾಗೃತಿ ವೇದಿಕೆಯ ಸದಸ್ಯರಾದ ಶಿವಪ್ರಸಾದ್ ಮಾದನಮನೆ ಇವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

.ಸುಳ್ಯ ತಾಲ್ಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಬಾಬು ಮಾಸ್ತರ್ ಅಚ್ರಪ್ಪಾಡಿ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು .ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಅನ್ನಪೂರ್ಣ ಅವರು ವಹಿಸಿದರು. ಏನೆಕಲ್ಲು ಒಕ್ಕೂಟದ ಅಧ್ಯಕ್ಷರಾದ ಲಕ್ಷ್ಮಣ ಸಂಕಡ್ಕ, ವಲಯ ಮೇಲ್ವಿಚಾರಕಿ ಶ್ರೀಮತಿ ಪ್ರಿಯಾ ಎನ್, ಸ್ಥಳೀಯ ಸೇವಾ ಪ್ರತಿನಿಧಿ ಶ್ರೀಮತಿ ತಾರಾ ಟಿ, ಏನೆಕಲ್ಲು ವಿಎಲ್ ಇ ಕು. ಸಹನಾ ಬಿ, ಒಕ್ಕೂಟದ ಪದಾಧಿಕಾರಿಗಳು, ಹಾಗೂ ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು .ಶ್ರೀಮತಿ ಪ್ರಿಯಾ ಎನ್ ಸ್ವಾಗತಿಸಿ, ಶಾಲಾ ಶಿಕ್ಷಕಿ ಶ್ರೀಮತಿ ಗಾಯತ್ರಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Exit mobile version