ಕೂತ್ಕುಂಜದಲ್ಲಿ ಸಂಭವಿಸಿದ ದುರ್ಘಟನೆ
ಪಂಜ ಸಮೀಪದ ಕೂತ್ಕುಂಜ ಗ್ರಾಮದ
ಬಸ್ತಿ ಕಾಡು ಎಂಬಲ್ಲಿ ಇಂದು ಸಂಜೆ ತಾಯಿ ಹತ್ತು ದಿನದ ಮಗುವನ್ನು ಬಾವಿಗೆ ಎಸೆದಿದ್ದು ಮಗು ಮೃತ ಪಟ್ಟ ಘಟನೆ ವರದಿಯಾಗಿದೆ.
ಬಾವಿಗೆ ಎಸೆದ ತಾಯಿ ಶ್ರೀಮತಿ ಪವಿತ್ರ. ಅವರು ಕೆಲವು ಸಮಯಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಇತ್ತೀಚೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು ಎನ್ನಲಾಗಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಘಟನೆ ನಡೆದಿದೆ.ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಆಗಮಿಸಿದ್ದು, ಶವವನ್ನು ಆಸ್ಪತ್ರೆಗೆ ಕೊಂಡೊಯ್ಯುಲಾಗಿದೆ.