ದುಗ್ಗಲಡ್ಕದ ಮಿತ್ರ ಯುವಕ ಮಂಡಲ ಕೊಯಿಕುಳಿ ಮತ್ತು ಕುರಲ್ ತುಳುಕೂಟ ದುಗ್ಗಲಡ್ಕ ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಹಾಗೂ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಮುಕ್ತ ಕೆಸರು ಗದ್ದೆ ಕ್ರೀಡಾ ಕೂಟ – ಕೆಸರ್ಡ್ ಒಂಜಿ ದಿನ ಕಾರ್ಯಕ್ರಮ ನ.6 ರಂದು ನೀರಬಿದಿರೆ ಮದಕ ದಿ.ರಾಮಕೃಷ್ಣ ನಾಯಕ್ ರ ಗದ್ದೆಯಲ್ಲಿ ನಡೆಯಲಿದ್ದು ಆಮಂತ್ರಣವನ್ನು ಇಂದು ಯುವಕ ಮಂಡಲದ ಕಟ್ಟಡದಲ್ಲಿ ಬಿಡುಗಡೆ ಮಾಡಲಾಯಿತು.
ಕುರಲ್ ತುಳುಕೂಟದ ಮಾಜಿ ಅಧ್ಯಕ್ಷ, ನಿವೃತ್ತ ಯೋಧ ಚಂದ್ರಶೇಖರ ಮದಕ ಆಮಂತ್ರಣ ಬಿಡುಗಡೆ ಮಾಡಿದರು. ಕುರಲ್ ತುಳುಕೂಟದ ಸಂಚಾಲಕ ಕೆ.ಟಿ.ವಿಶ್ವನಾಥ ಶುಭ ಹಾರೈಸಿದರು.
ಕುರಲ್ ತುಳುಕೂಟದ ಅಧ್ಯಕ್ಷೆ ನವ್ಯ ದಿನೇಶ್ ಕೊಯಿಕುಳಿ, ಕಾರ್ಯದರ್ಶಿ ಮನೋಜ್ ಪಾನತ್ತಿಲ, ಯುವಕ ಮಂಡಲದ ಗೌರವಾಧ್ಯಕ್ಷ ದಿನೇಶ್ ಕೊಯಿಕುಳಿ, ಅಧ್ಯಕ್ಷ ಚೇತನ್ ಕಲ್ಮಡ್ಕ, ಕಾರ್ಯದರ್ಶಿ ಪ್ರದೀಪ್ ಕೊಯಿಕುಳಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಾಜಿ ನ.ಪಂ.ಅಧ್ಯಕ್ಷೆ ಶೀಲಾವತಿ ಮಾಧವ, ಯುವಕ ಮಂಡಲದ ಮಾಜಿ ಅಧ್ಯಕ್ಷರುಗಳಾದ ಲಿಂಗಪ್ಪ ಮೂಡೆಕಲ್ಲು, ಕೆ.ಟಿ.ಭಾಗೀಶ್,ಆನಂದ ಗೌಡ ನೀರಬಿದಿರೆ, ಧನಂಜಯ ಕಲ್ಮಡ್ಕ, ಕೋಶಾಧಿಕಾರಿ ಚಿದಾನಂದ ಕೊಯಿಕುಳಿ, ಸುರೇಶ್ ನಾಯಕ್, ಪ್ರಿಯಾ ಸದಾನಂದ ಮೊದಲಾದವರು ಉಪಸ್ಥಿತರಿದ್ದರು.
ನವ್ಯ ದಿನೇಶ್ ಕೊಯಿಕುಳಿ ಸ್ವಾಗತಿಸಿ, ಮನೋಜ್ ಪಾನತ್ತಿಲ ವಂದಿಸಿದರು. ರಮೇಶ್ ನೀರಬಿದಿರೆ ಕಾರ್ಯಕ್ರಮ ನಿರೂಪಿಸಿದರು.