ಅಕ್ಟೋಬರ್ 29 ರಂದು , ಶಿಶು ಅಭಿವೃದ್ಧಿ ಯೋಜನೆ ಸುಳ್ಯ ಹಾಗೂ ಬಾಲ ಭವನ ಸೊಸೈಟಿ ಬೆಂಗಳೂರು ಇದರ ವತಿಯಿಂದ ಗಾಂಧಿ ಜಯಂತಿ ಆಚರಣೆ ಅಂಗವಾಗಿ ಸ್ತ್ರೀಶಕ್ತಿ ಭವನ ಸುಳ್ಯದಲ್ಲಿ ಏರ್ಪಡಿಸಲಾದ ಚಿತ್ರಕಲಾ ಸ್ಪರ್ಧೆಯಲ್ಲಿ ರೋಟರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರೌಢ ಶಾಲಾ ವಿಭಾಗದಲ್ಲಿ 9ನೇ ತರಗತಿಯ ಪ್ರಣಮ್ಯ ಎನ್ ಆಳ್ವ ಪ್ರಥಮ ಸ್ಥಾನ ಮತ್ತು 9ನೇ ತರಗತಿಯ ಶರಧಿ ಆರ್ ಶೇಟ್ ದ್ವಿತೀಯ ಸ್ಥಾನ ಪಡೆದಿದ್ದಾರೆ .
ಹಿರಿಯ ಪ್ರಾಥಮಿಕ ವಿಭಾಗದಲ್ಲಿ 6ನೇ ತರಗತಿಯ ವಿದ್ಯಾರ್ಥಿನಿ ವಂಶಿ ಬಿ ಆರ್ ಪ್ರಥಮ ಸ್ಥಾನ ಮತ್ತು
ಏಳನೇ ತರಗತಿಯ ವಿದ್ಯಾರ್ಥಿನಿ ಭೂಮಿಕಾ ಕೆ.ವಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಕಿರಿಯ ಪ್ರಾಥಮಿಕ ವಿಭಾಗದಲ್ಲಿ ಮೂರನೇ ತರಗತಿಯ ಸನ್ನಿಧಿ ಭಟ್ ದ್ವಿತೀಯ ಸ್ಥಾನ ಹಾಗೂ ಎರಡನೇ ತರಗತಿಯ ಅನಿಸಿಕ ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ .
ಇವರಿಗೆ ವಿದ್ಯಾಸಂಸ್ಥೆಯ ಕಲಾ ಶಿಕ್ಷಕರಾದ ಶ್ರೀಹರಿ ಪೈಂದೋಡಿ ಹಾಗೂ ಪದ್ಮನಾಭ ಕೊಯ್ನಾಡು ತರಬೇತಿ ನೀಡಿರುತ್ತಾರೆ.