Site icon Suddi Belthangady

ದೆಹಲಿ ತುಳುಸಿರಿಯ ಅಧ್ಯಕ್ಷರಾಗಿ ವಸಂತ ಶೆಟ್ಟಿ ಬೆಳ್ಳಾರೆ ಆಯ್ಕೆ

 

ಅ.30 ರಂದು ದೆಹಲಿ ಕನ್ನಡ ಶಿಕ್ಷಣ ಸಂಸ್ಥೆಯಲ್ಲಿ ನಡೆದ ದೆಹಲಿ ತುಳುಸಿರಿಯ ವಾರ್ಷಿಕ ಮಹಾಸಭೆಯಲ್ಲಿ 2022 – 24ನೇ ಸಾಲಿನ ದೆಹಲಿ ತುಳುಸಿರಿಯ ಅಧ್ಯಕ್ಷರನ್ನಾಗಿ ವಸಂತ ಶೆಟ್ಟಿ ಬೆಳ್ಳಾರೆ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ವಸಂತ ಶೆಟ್ಟಿ ಬೆಳ್ಳಾರೆ ಅವರು ದೆಹಲಿ ಕನ್ನಡ ಶಿಕ್ಷಣ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷರು, ದೆಹಲಿ ಕರ್ನಾಟಕ ಸಂಘದ ಮಾಜಿ ಅಧ್ಯಕ್ಷರು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರು ಹಾಗೂ ದೆಹಲಿಯ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ದೆಹಲಿ ತುಳುವರಿಗೆ ಮಾತ್ರವಲ್ಲ ದೆಹಲಿ ಕನ್ನಡಿಗರಿಗೆ ಪರಿಚಿತರು.
ಉಪಾಧ್ಯಕ್ಷರುಗಳಾಗಿ ಮಾಲಿನಿ ಪ್ರಹ್ಲಾದ್, ಡಾ. ಪ್ರಶಾಂತಿ ಶೆಟ್ಟಿ, ಕಾರ್ಯದರ್ಶಿಯಾಗಿ ಶ್ರೀಹರಿ, ಜೊತೆ ಕಾರ್ಯದರ್ಶಿಗಳಾಗಿ ಪ್ರದೀಪ ರಾವ್, ಅರವಿಂದ ಬಿಜೈ, ಖಜಾಂಚಿಯಾಗಿ ರವಿ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಪ್ರಕಾಶ್ ಶೆಟ್ಟಿ ಉಳ್ಳೇಪಾಡಿ, ಕಾರ್ತಿಕ್ ರೈ ಆಯ್ಕೆಯಾಗಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.

Exit mobile version