Site icon Suddi Belthangady

ನ.1:  ಕನ್ನಡ ರಾಜ್ಯೋತ್ಸವ ದ ಪ್ರಯುಕ್ತ ಅರಂಬೂರಿನಲ್ಲಿ ಜನ ಸಂಚಲನ ಕಾರ್ಯಕ್ರಮ

 

ಸುಳ್ಯ ಎಸ್ ಕೆ ಎಸ್ ಎಸ್ ಎಫ್ ಕ್ಲಸ್ಟರ್ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ
“ಆರೋಗ್ಯ ಕರ್ನಾಟಕಕ್ಕೆ ಯುವಜನ ಜಾಗೃತಿ”ಎಂಬ ಧ್ಯೇಯ ವಾಕ್ಯದೊಂದಿಗೆ ಜನ ಸಂಚಲನ ಕಾರ್ಯಕ್ರಮ ನ.1 ರಂದು ಸಂಜೆ 4 ಗಂಟೆಗೆ ಅರಂಬೂರು ಬದ್ರ್ ಜುಮ್ಮಾ ಮಸೀದಿ ಮುಂಭಾಗದಲ್ಲಿ ನಡೆಯಲಿದೆ.
ಕಾರ್ಯಕ್ರಮ ದಲ್ಲಿ ಪೇರಡ್ಕ ಜುಮ್ಮಾಮಸೀದಿ ಖತೀಬರಾದ ಬಹು ರಿಯಾಝ್ ಫೈಝಿ,ತೆಕ್ಕಿಲ್ ಪ್ರತಿಷ್ಠಾನ ಅಧ್ಯಕ್ಷ ಟಿ.ಎಮ್ ಶಹೀದ್ ,ಅಲೆಟ್ಟಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೀರ್ತಿಪ್ರಸಾದ್ ,ಅಲೆಟ್ಟಿ ಗ್ರಾಮ ಪಂಚಾಯತ್ ಸದಸ್ಯ ಧರ್ಮಪಾಲ ಕೈೂಂಗಾಜೆ,ಬದ್ರ್ ಜುಮ್ಮಾ ಮಸೀದಿ ಅಧ್ಯಕ್ಷ ಬಾಷಾ ಸಾಹೇಬ್ ಅರಂಬೂರು,ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎಸ್ ಸಂಸುದ್ದೀನ್,ಸುಳ್ಯ ತಾಲ್ಲೂಕು ಮದರಸ ಮ್ಯಾನೇಜ್‌ಮೆಂಟ್ ಅಧ್ಯಕ್ಷ ತಾಜ್ ಮಹಮ್ಮದ್ ಸಂಪಾಜೆ,ಸುನ್ನಿ ಮಹಲ್ ಫೆಡರೇಶನ್ ಅಧ್ಯಕ್ಷ ಹಮೀದ್ ಹಾಜಿ ಸುಳ್ಯ ,ಸಾದಿಖ್ ಕಲ್ಲೋಣಿ,ಸುಳ್ಯ ಕ್ಲಸ್ಟರ್ ಅಧ್ಯಕ್ಷ ಸಿದ್ದೀಖ್ ತಟ್ಟುಕಡ,ಅರಂತೋಡು ಜುಮ್ಮಾ ಮಸೀದಿ ಅಧ್ಯಕ್ಷ ಅಶ್ರಫ್ ಗುಂಡಿ, ಸೇರಿದಂತೆ ಸಾಮಾಜಿಕ ಧಾರ್ಮಿಕ ಮುಖಂಡರು ಭಾಗವಹಿಸಲಿದ್ದಾರೆ ಎಂದು ಕ್ಲಸ್ಟರ್ ಕಾರ್ಯದರ್ಶಿ ತಾಜುದ್ದೀನ್ ಅರಂತೋಡು ತಿಳಿಸಿದ್ದಾರೆ.

Exit mobile version