ನಿಂತಿಕಲ್ಲು: ಹೆಚ್. ಎಂ.ನಂದಕುಮಾರ್ ಅಭಿಮಾನಿಗಳಿಂದ ನಿರ್ಮಿಸಿದ ಆಟೋ ರಿಕ್ಷಾ ನಿಲ್ದಾಣ ಉದ್ಘಾಟನೆ

0

 

ನಿಂತಿಕಲ್ಲಿನಲ್ಲಿ ಕೆಪಿಸಿಸಿ ಸಂಯೋಜಕ ಹೆಚ್ ಎಂ ನಂದಕುಮಾರ್ ಅಭಿಮಾನಿಗಳು ನಂದಕುಮಾರ್ ರವರ ಸಹಕಾರದಲ್ಲಿ ನಿರ್ಮಿಸಿದ ಸುಸಜ್ಜಿತ ರಿಕ್ಷಾ ನಿಲ್ದಾಣ ಉದ್ಘಾಟನೆ ಇಂದು ನಡೆಯಿತು. ಮಾಜಿ ಸಚಿವ  ಬಿ. ರಾಮಾನಾಥ ರೈ ಯವರು ವಿದ್ಯುಕ್ತವಾಗಿ ಉದ್ಘಾಟಿಸಿದರು.

ನಾಮಫಲಕ ಅನಾವರಣವನ್ನು ಪುತ್ತೂರು ಮಾಜಿ ಶಾಸಕಿ ಶ್ರೀಮತಿ ಶಕುಂತಲಾ ಶೆಟ್ಟಿ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕೆಪಿಸಿಸಿ ಸದಸ್ಯ ಭರತ್ ಮುಂಡೋಡಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎನ್ ಜಯಪ್ರಕಾಶ್ ರೈ, ಕಡಬ ಬ್ಲಾಕ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಸಭೆಯನ್ನು ಉದ್ದೇಶಿಸಿ ಮಾತನಾಡಿ ಶುಭ ಹಾರೈಸಿದರು.

ಸಭೆಯ ಅಧ್ಯಕ್ಷತೆಯನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿಸಿ ಜಯರಾಮ್ ವಹಿಸಿದ್ದರು. ಈ ಸಂದರ್ಭದಲ್ಲಿ ಆಟೋ ರಿಕ್ಷಾ ಚಾಲಕ ಮಾಲಕ ಸಂಘದ ಸದಸ್ಯರು ಕೊಡುಗೈ ದಾನಿ ಹೆಚ್ ಎಂ ನಂದಕುಮಾರ್ ರವರನ್ನು  ಗೌರವಿಸಿ ಸನ್ಮಾನಿಸಿದರು. ಎನ್ ಟಿ ವಸಂತ ಸ್ವಾಗತಿಸಿ, ರಮೇಶ್ ಕೋಟೆ ವಂದಿಸಿದರು.

 

LEAVE A REPLY

Please enter your comment!
Please enter your name here