ಕೆ.ವಿ.ಜಿ.ಪಾಲಿಟೆಕ್ನಿಕ್ ಕುರುಂಜಿಭಾಗ್ ಸುಳ್ಯ ಇದರ ಕಂಪ್ಯೂಟರ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿ ಶಾಶ್ವತ್ ಇವರು ಕರ್ನಾಟಕ ತಾಂತ್ರಿಕ ಶಿಕ್ಷಣ ಇಲಾಖೆಯು ನಡೆಸಿದ ರಾಜ್ಯ ಮಟ್ಟದ ಪರೀಕ್ಷೆಯಲ್ಲಿ ೩ನೇ ರ್ಯಾಂಕ್ ಪಡೆದಿದ್ದಾರೆ.
ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನ. ೦2 ರಂದು ನಡೆದ ನಾಲ್ವಡಿ ಕೃಷ್ಣರಾಜ ಒಡೆಯರ ಘಟಿಕೋತ್ಸವ ೨೦೨೨ ಸಮಾರಂಭದಲ್ಲಿ, ಕಾಲೇಜ್ ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಡಾ. ಪ್ರದೀಪ್ ರವರು ಮಾನ್ಯ ಉನ್ನತ ಶಿಕ್ಷಣ ಸಚಿವರಾದ ಡಾ.ಅಶ್ವತ್ ನಾರಾಯಣ ಸಿ.ಎನ್ ರವರ ಸಮ್ಮುಖದಲ್ಲಿ ಪದಕ ಮತ್ತು ಪ್ರಮಾಣ ಪತ್ರ ಪ್ರದಾನ ಮಾಡಿದರು.