ವಕೀಲ ಕುಲದೀಪ್ ಮೇಲೆ ಹಲ್ಲೆ ಆರೋಪ : ಪುಂಜಾಲಕಟ್ಟೆ ಠಾಣೆಯ ಎಸ್.ಐ ಸುತೇಶ್ ಎಸ್.ಪಿ. ಕಚೇರಿಗೆ ವರ್ಗಾವಣೆ

0


ಪುಂಜಾಲಕಟ್ಟೆ : ವಕೀಲರಾದ ಕುಲದೀಪ್ ಶೆಟ್ಟಿ ರವರ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿರುವ ಪುಂಜಾಲಕಟ್ಟೆ ಠಾಣೆಯ ಪೊಲೀಸ್ ಸಬ್ ಇಸ್ಪೆಕ್ಟರ್ ಸುತೇಶ್ ರವರನ್ನು ಎಸ್.ಪಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಪುಂಜಾಲಕಟ್ಟೆ ಠಾಣೆಯ ಪೊಲೀಸ್ ಸಬ್ ಇಸ್ಪೆಕ್ಟರ್ ಸುತೇಶ್ ರವರು ಮತ್ತು ಸಿಬ್ಬಂದಿಗಳು ಜಾಗದ ವಿಚಾರವೊಂದರ ಪ್ರಕರಣದಲ್ಲಿ ವಕೀಲರಾದ ಕುಲದೀಪ್ ಶೆಟ್ಟಿ ರವರ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿತ್ತು. ಈ ಬಗ್ಗೆ ಅವರ ಮೇಲೆ ಕ್ರಮಕೈಗೊಳ್ಳುವಂತೆ ವಕೀಲರ ಸಂಘದಿಂದ ಪ್ರತಿಭಟನೆ ಕೂಡ ನಡೆಸಲಾಗಿತ್ತು ಎಂದು ತಿಳಿದು ಬಂದಿದೆ.

ಈ ಬಗ್ಗೆ ಯಾವುದೇ ವಿಚಾರಣೆ ನಡೆಸದೆ ಇಲಾಖೆಯು ಪುಂಜಾಲಕಟ್ಟೆ ಠಾಣೆಯ ಪೊಲೀಸ್ ಸಬ್ ಇನ್ಸೆಕ್ಟರ್ ಸುತೇಶ್ ರನ್ನು ನೇರವಾಗಿ ಎಸ್.ಪಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ..

LEAVE A REPLY

Please enter your comment!
Please enter your name here