Site icon Suddi Belthangady

ಗುರುವಾಯನಕೆರೆ: ಸ.ಹಿ.ಪ್ರಾ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ

ಗುರುವಾಯನಕೆರೆ: ಸ.ಹಿ.ಪ್ರಾ ಶಾಲೆ ಗುರುವಾಯನಕೆರೆ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಧ್ವಜಾರೋಹಣವನ್ನು ನೆರವೇರಿಸಿ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿದರು.

ಸಂಜೆ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಶ್ರೀಮತಿ ಆಶಾಲತಾ ವಹಿಸಿದ್ದರು. ಶಾಸಕ ಹರೀಶ್ ಪೂಂಜರವರು ಗ್ರಾಮ ಪಂಚಾಯತ್ ಅನುದಾನದಲ್ಲಿ ಕಾಂಕ್ರಿಟ್ ರಸ್ತೆ ಮತ್ತು ಶಾಲಾ ಗೇಟನ್ನು ಉದ್ಘಾಟಿಸಿ ಅತಿಥಿಯಾಗಿ ಆಗಮಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪ್ರದೀಪ್ ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಹೆಚ್.ಎಸ್, ಸಮನ್ವಯಾಧಿಕಾರಿ ಶಂಭುಶಂಕರ್, ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಸುಮಂತ್ ಜೈನ್.ಬಿ, ಬೆಂಗಳೂರಿನ ಮ್ಯಾನೇಜರ್ ಡೈರೆಕ್ಟರ್ ತಸ್ಲಿಂ ಆರೀಫ್, ಅಬ್ದುಲ್ ರಶೀದ್, ಡಾ| ಕಿರಣ್ ಕುಮಾರ್, ಹಿರಿಯ, ವಿದ್ಯಾರ್ಥಿ ದಾನಿಗಳಾದ ಮನೋಜ್ ಕುಮಾರ್, ಪ್ರಾನ್ಸಿಸ್ ಪಿಂಟೋ ಬದ್ಯಾರ್ ಉಪಸ್ಥಿತರಿದ್ದರು.

ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಹಾಜಿ ಅಬ್ದುಲ್ ಲತೀಫ್, ಮುಖ್ಯ ಶಿಕ್ಷಕಿ ಉಮಾ.ಎನ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷರುಗಳಿಗೆ, ಅಕ್ಷರದಾಸೋಹ ಸಿಬ್ಬಂದಿ ವರ್ಗ, ದಾನಿಗಳಿಗೆ, ಶಿಕ್ಷಕ ವೃಂದಗಳಿಗೆ ಮತ್ತು ಈ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಶಿಕ್ಷಕಿ ಪ್ರಾರ್ಥನಾ ಇವರಿಗೆ, ಶಾಸಕರು ಮತ್ತು ಬಿ.ಇ.ಒ ಎಲ್ಲರಿಗೂ ಸನ್ಮಾನಿಸಲಾಯಿತು.

ಕಾರ್ಯಕ್ರಮವನ್ನು ಎಸ್‌ಡಿಎಂಸಿ ಅಧ್ಯಕ್ಷ ಸ್ವಾಗತಿಸಿ, ಧರಣೇಂದ್ರ ಕಾರ್ಯಕ್ರಮ ನಿರೂಪಿಸಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ವಂದಿಸಿದರು.ಅಂಗನವಾಡಿ ಪುಟಾಣಿಗಳಿಂದ ಮತ್ತು ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮವು ನಡೆಯಿತು. ಅಟೋಟ ಸ್ಪರ್ಧೆಯಲ್ಲಿ ವಿಜೇತರಾದ ಎಲ್ಲಾ ಮಕ್ಕಳಾದ ಬಹುಮಾನ ವಿತರಣೆ ಮಾಡಿದರು.

Exit mobile version