ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಕಲಾಪ್ರತಿಭೋತ್ಸವ

0

ಉಜಿರೆ : ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಡಿ.8 ರಂದು ಕಲಾಪ್ರತಿಭೋತ್ಸವ ನಡೆಯಿತು.
ಬೆಳ್ತಂಗಡಿ ತಾಲೂಕು ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯ ಅಧಿಕಾರಿ ಶಂಭುಶಂಕರ್ ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಅವಕಾಶ ಸಿಕ್ಕಾಗ ತಮ್ಮ ಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಿಕೊಳ್ಳಿ ಎಂದು ಕರೆ ನೀಡಿದರು.

ಶ್ರೀ. ಧ.ಮಂ.ಶಿಕ್ಷಣ ಸಂಸ್ಥೆಯ ಕಾರ್ಯ ನಿರ್ವಹಣಾಧಿಕಾರಿ ಹರೀಶ್ ಎಂ.ವೈ. ರವರು ಅತಿಥಿಗಳಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಯ ಶ ಪದ್ಮರಾಜ್ ಎನ್. ವಹಿಸಿದ್ದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶಿಕ್ಷಕ ರಮೇಶ್ ಮಯ್ಯ ಸ್ವಾಗತಿಸಿ ಶಿಕ್ಷಕಿ ಶ್ರೀಮತಿ ಜಯಶ್ರೀ ಬಿ. ಜೈನ್ ವಂದಿಸಿದರು.

LEAVE A REPLY

Please enter your comment!
Please enter your name here