ಕೊರಂಜ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಗೇರುಕಟ್ಟೆ : ಕೊರಂಜ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಡಿ.8 ರಂದು ಶಾಲಾ ಶಾರದಾ ಕಲಾ ಮಂಟಪದಲ್ಲಿ ಜರುಗಿತು.

ಕಳಿಯ ಗ್ರಾಮದ ಕೊರಂಜ ಸರಕಾರಿ ಉನ್ನತೀಕರಿಸಿದ ಶಾಲಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕ ಬಿಡುಗಡೆ ಕಾರ್ಯಕ್ರಮದಲ್ಲಿ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿ, ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಭಾಷಿಣಿ ಜನಾರ್ದನ ಗೌಡ ನೆರವೇರಿಸಿ ಶುಭ ಹಾರೈಸಿದರು.

ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಬಿ.ಸಭಾಧ್ಯಕ್ಷತೆ ವಹಿಸಿದ್ದರು. ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮದ ಯಶಸ್ವಿಗೆ ವಿಧ್ಯಾಭಿಮಾನಿಗಳು ಸಹಕರಿಸುವಂತೆ ಸಭೆಯಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕಳಿಯ ಗ್ರಾಮ ಪಂಚಾಯತು ಸದಸ್ಯ ಅಬ್ದುಲ್ ಕರೀಂ, ಗೇರುಕಟ್ಟೆ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಜನಾರ್ದನ ಗೌಡ ಕೆ, ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ಮಾಜಿ ಅಧ್ಯಕ್ಷ ಜಯಾನಂದ, ನಾಳ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ ಎಮ್, ಶಾಲಾ ವಾರ್ಷಿಕೋತ್ಸವದ ಸಮಿತಿ ಅಧ್ಯಕ್ಷ ಸತೀಶ್ ಭಂಡಾರಿ ವಾರ್ಷಿಕೋತ್ಸವ ಯಶಸ್ವಿಗೆ ಶುಭ ಹಾರೈಸಿದರು.

ಕಳಿಯ ಗ್ರಾಮ ಪಂಚಾಯತು ಸದಸ್ಯ ಶಕುಂತಲಾ, ಗುರುವಾಯನಕೆರೆ ಕ್ಲಸ್ಟರ್ ಸಿ.ಆರ್.ಪಿ ರಾಜೇಶ್ ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷೆ ಆಸ್ಮಾ, ಸದಸ್ಯರಾದ ಸಿದ್ಧೀಕ್ ಜಿ.ಹೆಚ್,ಶೇಖರ ಎಮ್,ಹನೀಫ್ ಜಿ,ಎ.ಮಹಮ್ಮದ್ ನಜೀರ್, ಮೋಹಿನಿ,ಪ್ರೇಮ ಶೆಟ್ಟಿ, ಗಾಯತ್ರಿ,ನಸೀಮಾ ಮುಖ್ಯ ಶಿಕ್ಷಕಿ ಶಾಂತಾ ಎಸ್. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಬಾಲಕಿಯರು ಪ್ರಾರ್ಥನೆ ಮಾಡಿದರು.

ಶಾಲಾ ಸಹ ಶಿಕ್ಷಕರಾದ ಸಿಬುಲ್ ಪಾೈಸ್, ಪ್ರೇಮಲತಾ ಕೆ, ವಿಧ್ಯಾ ಪಿ, ಸೌಮ್ಯ ಬಿ, ಶೃತಿ ಜಿ.ಬಿ, ಹೇಮಾಲತಾ, ನಾಳ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಭುವನೇಶ್ ಜಿ, ವಾರ್ಷಿಕೋತ್ಸವ ಸಮಿತಿ ಪದಾಧಿಕಾರಿಗಳು, ಮಕ್ಕಳ ಪೋಷಕರು, ವಿಧ್ಯಾಭಿಮಾನಿಗಳು ಮತ್ತು ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.
ಕಳಿಯ ಗ್ರಾಮ ಪಂಚಾಯತು ಸದಸ್ಯ,ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಬಿ ಸ್ವಾಗತಿಸಿದರು.

ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ರವಿರಾಜ ಗೌಡ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕಿ ಅನುರಾಧ ಬಿ.ಸಿ, ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here