Site icon Suddi Belthangady

ಮಲವಂತಿಗೆ ಅಬ್ಬಿಯಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ವಿಳಾಸ ಪತ್ತೆಗೆ ಪೊಲೀಸರ ಮನವಿ

ಬೆಳ್ತಂಗಡಿ: ಮಲವಂತಿಗೆ ಗ್ರಾಮದ ‌ಅಬ್ಬಿ ಎಂಬಲ್ಲಿ ರಸ್ತೆ ಅಪಘಾತ ಪ್ರಕರಣದಲ್ಲಿ ಗಾಯಗೊಂಡು ಮೃತಪಟ್ಟಿರುವ ಅಪರಿಚಿತ ವ್ಯಕ್ತಿಯ ಬಗ್ಗೆ ಮಾಹಿತಿ ತಿಳಿದಲ್ಲಿ ಪೊಲೀಸ್ ಠಾಣೆಗೆ ತಿಳಿಸುವಂತೆ ಬೆಳ್ತಂಗಡಿ ಸಂಚಾರ ಪೊಲೀಸ್ ಉಪ ನಿರೀಕ್ಷಕರು ತಿಳಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಅಬ್ಬಿ ಎಂಬಲ್ಲಿ ಡಿ.7ರಂದು ನೊಂದಣಿಯಾಗದ ಹೊಸ ಟ್ರಾಕ್ಟರ್ ವಾಹನವನ್ನು ಚಾಲಕ ದೀಪಕ್ ಎಂಬಾತ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಪಾದಾಚಾರಿ ಲೋಕೇಶ್ ಎಂಬಾತನಿಗೆ ಡಿಕ್ಕಿ ಹೊಡೆದು ರಸ್ತೆ ಬದಿಯ ತೋಟಕ್ಕೆ ಪಲ್ಟಿಹೊಡೆದಿದೆ. ಪರಿಣಾಮ ಪಾದಾಚಾರಿ ಲೋಕೇಶ್ ರವರ ತಲೆಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸುತ್ತಿದ್ದಾರೆ.

ಮೃತ ಪಟ್ಟ ವ್ಯಕ್ತಿ ಲೋಕೇಶ್ ಎಂಬಾತ ಅಪರಿಚಿತ ವ್ಯಕ್ತಿಯಾಗಿದ್ದಾನೆ. ಈತನಿಗೆ ಅಂದಾಜು 32 ವರ್ಷ ವಯಸ್ಸಾಗಿದ್ದು, 5.6 ಸೆ.ಮೀ ಎತ್ತರವಿದ್ದು, ಎಣ್ಣೆ ಕಪ್ಪು ಮೈಬಣ್ಣ ಹಾಗೂ ಬೂದುಗೆರೆಗಳಿರುವ ಅರ್ಧ ತೋಳಿನ ಟಿ ಶರ್ಟ್ , ಹಳದಿ ಬಣ್ಣದ ಬರ್ಮುಡ ಚಡ್ಡಿಯನ್ನು ಧರಿಸಿದ್ದರು. ಯಾರಿಗಾದರು ಈ ವ್ಯಕ್ತಿಯ ಬಗ್ಗೆ ತಿಳಿಸಿದ್ದರೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಗೆ( 08256-234100) ಮಾಹಿತಿ ನೀಡುವಂತೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version