ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕಂಡರಿ ಶಾಲೆಯ
ವಾರ್ಷಿಕ ಕ್ರೀಡಾಕೂಟ

0

ಉಜಿರೆ:ಉಜಿರೆ ಶ್ರೀ. ಧ. ಮಂ, ಶಿಕ್ಷಣ ಸಂಸ್ಥೆಗಳಾದ ಎಸ್. ಡಿ.ಎಂ. ಅನುದಾನಿತ ಸೆಕೆಂಡರಿ ಶಾಲೆ ಎಸ್. ಡಿ. ಎಂ. ಸ್ಪೇಟ್, ಎಸ್.ಡಿ.ಎಂ ಸಿ.ಬಿ.ಎಸ್.ಸಿ., ಇದರ ಜಂಟಿ ಆಶ್ರಯದಲ್ಲಿ ಪ್ರಚಲಿತ ಶೈಕ್ಷಣಿಕ ವರ್ಷ 2022-23ರ ವಾರ್ಷಿಕೋತ್ಸವದ ಪ್ರಯುಕ್ತ ಕ್ರೀಡಾಕೂಟವನ್ನು ಬೆಳ್ತಂಗಡಿ ತಾಲೂಕು ಪೊಲೀಸ್‌ ವೃತ್ತ ನಿರೀಕ್ಷಕ ಶಿವಕುಮಾರ್ ಪಥಸಂಚಲನದ ಗೌರವ ರಕ್ಷೆಯನ್ನು ಸ್ವೀಕರಿಸಿ, ಧ್ವಜಾರೋಹಣ ನೆರವೇರಿಸಿ ಕ್ರೀಡಾಕೂಟವನ್ನು ಉದ್ಘಾಟಿಸಿದರು.

ಎಸ್. ಡಿ. ಎಂ. ಶಿಕ್ಷಣ ಸಂಸ್ಥೆಯ ಕಾರ್ಯನಿರ್ವಾಹಣಾಧಿಕಾರಿ ಎಂ. ಹರೀಶ್‌ ಹಾಗೂ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಸೋಮಶೇಖರ್ ಬಿ. ಶೆಟ್ಟಿ ಕ್ರೀಡಾ ಕ್ಲಬ್ ನ ಕಾರ್ಯದರ್ಶಿ ರಮೇಶ್ ಹಾಗೂ ಸೆಕೆಂಡರಿ ಶಾಲೆಯ ಮುಖ್ಯೋಪಾಧ್ಯಯ ಪದ್ಮರಾಜು ಅಂಗ್ಲ ಮಾದ್ಯಮ ಶಾಲೆ ಸಿ.ಬಿ.ಎಸ್.ಸಿ ಮುಖ್ಯೋಪಾಧ್ಯಾಯ ಮನಮೋಹನ್ ನಾಯಕ್‌ ಆಂಗ್ಲ ಮಾಧ್ಯಮ ಶಾಲೆಯ ಸ್ಟೇಟ್ ಇದರ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿದ್ಯಾಲಕ್ಷ್ಮಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕ ರಮೇಶ್ ಮಯ್ಯ ಸ್ವಾಗತಿಸಿದರು. ಶಿಕ್ಷಕ ಸುರೇಶ್ ವಂದಿಸಿದರು ಶಿಕ್ಷಕ ರಾಧಾಕೃಷ್ಣ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here