Site icon Suddi Belthangady

ಕಾಶಿಪಟ್ನ: ಆಟೋ ಮತ್ತು ಸ್ಕೂಟರ್ ಅಪಘಾತ: ಸ್ಕೂಟರ್ ಸವಾರ ಸಾವು

ಕಾಶಿಪಟ್ನ: ಕಾಶಿಪಟ್ನ ಗ್ರಾಮದಲ್ಲಿ ಆಟೊ ಮತ್ತು ಸ್ಕೂಟರ್ ನಡುವೆ ಡಿ.13 ರಂದು ಸಂಭವಿಸಿದ ಅಪಘಾತದಲ್ಲಿ ನಾರಾವಿ ಗ್ರಾಮದ ಹಂಬಡ ನಿವಾಸಿ, ಪ್ರಗತಿಪರ ಕೃಷಿಕ ನಿತ್ಯಾನಂದ ಪೂಜಾರಿ (48) ಮೃತಪಟ್ಟಿದ್ದಾರೆ.

ನಿತ್ಯಾನಂದ ಪೂಜಾರಿ ಅವರು ಶಿರ್ತಾಡಿ ಕಡೆಯಿಂದ ಪೆರಾಡಿಯತ್ತ ಸ್ಕೂಟರ್‌ನಲ್ಲಿ ಸಾಗುತ್ತಿದ್ದರು. ವಿರುದ್ಧ ದಿಕ್ಕಿನಿಂದ ಬಂದ ಆಟೊ ಮಧ್ಯೆ ಮುಮುಖಿ ಅಪಘಾತ ಸಂಭವಿಸಿದೆ. ಗಂಭೀರ ಗಾಯ ಗೊಂಡ ಸ್ಕೂಟರ್ ಸವಾರ ನಿತ್ಯಾನಂದ ಪೂಜಾರಿ ಮೃತಪಟ್ಟಿದ್ದಾರೆ.ಪೊಲೀಸರು ಸ್ಥಳಕ್ಕೆ ತೆರಳಿ, ಮರಣೋತ್ತರ ಪರೀಕ್ಷೆಗೆ ಗಾಗಿ ಮೃತದೇಹವನ್ನು ಬೆಳ್ತಂಗಡಿಯ ಸಾರ್ವಜನಿಕ ಆಸ್ಪತ್ರೆ ಗೆ ಕೊಂಡೊಯ್ಯಲಾಗಿದೆ.ಮೃತರಿಗೆ ತಾಯಿ, ಪತ್ನಿ ನಾರಾವಿ ಗ್ರಾಮ ಪಂಚಾಯಿತಿ ಸದಸ್ಯೆ ಮಲ್ಲಿಕಾ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.

Exit mobile version