ಕೊಕ್ಕಡ: ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ: ಬಾಲಾಲಯದಲ್ಲಿ ದೇವರ ಪ್ರತಿಷ್ಠೆ: ಸಭಾಕಾರ್ಯಕ್ರಮ

0

ಕೊಕ್ಕಡ: ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಎಡಮನೆ ಬ್ರಹ್ಮಶ್ರೀ ಕೆ.ಯು ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಡಿ.12 ರಿಂದ ಡಿ.14ರವರೆಗೆ ಅನುಜ್ಞಾ ಪ್ರಾರ್ಥನೆಯೊಂದಿಗೆ ಶ್ರೀ ವಿಶ್ವಪ್ರಸನ್ನ ತೀರ್ಥರ ಉಪಸ್ಥಿತಿಯಲ್ಲಿ ದೇವರನ್ನು ಬಾಲಾಲಯದಲ್ಲಿ ಪ್ರತಿಷ್ಠೆ ಮಾಡಲಾಯಿತು. ಮಧ್ವ ಮಂಟಪ ಕ್ಕೆ ಸ್ವಾಮೀಜಿ ಶಿಲಾನ್ಯಾಸ ನೆರವೇರಿಸಿದರು.

ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಉಡುಪಿ ಪೇಜಾವರ ಆಧೋಕ್ಷಜ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಘನ ಅಧ್ಯಕ್ಷತೆಯನ್ನು ವಹಿಸಿ, ಆಶೀರ್ವಚನ ನೀಡಿದರು.ಮುಖ್ಯಅತಿಥಿಗಳಾಗಿ ಕೊಕ್ಕಡ ಗ್ರಾ.ಪಂ ಅಧ್ಯಕ್ಷ ಯೋಗೀಶ ಆಲಂಬಿಲ, ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ರಾಧಾಕೃಷ್ಣ ಯಡಪಡಿತ್ತಾಯ ಉಪಸ್ಥಿತರಿದ್ದರು. ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಲಕೃಷ್ಣ ಕೆದಿಲಾಯ ಪ್ರಸ್ತಾವನೆಗೈದು ಜೀರ್ಣೋದ್ಧಾರದ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಕು| ದೀಕ್ಷಾ ಪ್ರಾರ್ಥನೆ ಮಾಡಿದರು. ಕುಶಾಲಪ್ಪ ಗೌಡ ಪುಡ್ಕೆತ್ತೂರು ಧನ್ಯವಾದಗೈದರು. ಹರಿಪ್ರಸಾದ್ ಕೆದಿಲಾಯ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here