Site icon Suddi Belthangady

ಜೇಸಿಐ ಬೆಳ್ತಂಗಡಿ ಮಂಜುಶ್ರೀಯ ಪೂರ್ವಾಧ್ಯಕ್ಷ ಸ್ವರೂಪ್ ಶೇಖರ್‌ ಜೇಸಿಐ ಭಾರತದ ವಲಯ 15 ರ ಆಡಳಿತ ಮಂಡಳಿಗೆ ಪಿ.ಆರ್ ಮತ್ತು ಮಾರ್ಕೆಟಿಂಗ್ ವಿಭಾಗದ ನಿರ್ದೇಶಕರಾಗಿ ಆಯ್ಕೆ

ಬೆಳ್ತಂಗಡಿ: ಜೇಸಿಐ ಬೆಳ್ತಂಗಡಿ ಮಂಜುಶ್ರೀಯ ಪೂರ್ವಾಧ್ಯಕ್ಷ, ಯುವ ಉದ್ಯಮಿ ಸ್ವರೂಪ್ ಶೇಖರ್‌ರವರು 2023 ನೇ ಸಾಲಿನ ಜೇಸಿಐ ಭಾರತದ ವಲಯ 15 ರ ಆಡಳಿತ ಮಂಡಳಿಗೆ ಪಿ.ಆರ್ ಮತ್ತು ಮಾರ್ಕೆಟಿಂಗ್ ವಿಭಾಗದ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.

ಪ್ರತಿಷ್ಠಿತ ಜೇಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ 2021 ರಲ್ಲಿ ಘಟಕದ ಅಧ್ಯಕ್ಷರಾಗಿ ಹಲವಾರು ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡುವುದರೊಂದಿಗೆ ಸಮಾಜದಲ್ಲಿ ಗುರುತಿಸಿಕೊಂಡಿದ್ದಾರೆ. ಅಲ್ಲದೆ ಹಲವಾರು ಸಂಘ ಸಂಸ್ಥೆಯಲ್ಲಿ ತೊಡಗಿಸಿಕೊಂಡಿದ್ದಾರೆ. 2022 ರಲ್ಲಿ ಜೇಸಿಐ ಭಾರತದ ವಲಯ 15 ರ ವಲಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

Exit mobile version