ಜೇಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಪದಪ್ರದಾನ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಬೆಳ್ತಂಗಡಿ: ಜೇಸಿಐ ಬೆಳ್ತಂಗಡಿ ಮಂಜುಶ್ರೀ ಇದರ 2022-23 ನೇ ಸಾಲಿನ ಪದಪ್ರದಾನ ಸಮಾರಂಭವು ಡಿ.22 ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಜೇಸಿಐ ಮಂಜುಶ್ರೀ ಘಟಕ ಅಧ್ಯಕ್ಷ ಪ್ರಸಾದ್ ಬಿ,ಎಸ್., ನಿಯೋಜಿತ ಅಧ್ಯಕ್ಷ ಶಂಕರ್ ರಾವ್, ನಿಕಟಪೂರ್ವಾಧ್ಯಕ್ಷ ಸ್ವರೂಪ್ ಶೇಖರ್, ಪೂರ್ವಾಧ್ಯಕ್ಷರುಗಳಾದ ನಾರಾಯಣ ಶೆಟ್ಟಿ, ಚಿದಾನಂದ ಇಡ್ಯ, ಕಿರಣ್ ಕುಮಾರ್ ಶೆಟ್ಟಿ, ಪ್ರಶಾಂತ್ ಲಾಲ, ಪದಾಧಿಕಾರಿಗಳಾದ ಸುಧೀರ್ ಕೆ.ಎನ್., ಶೀತಲ್ ಜೈನ್, ರಂಜಿತ್ ಹೆಚ್.ಡಿ, ಪ್ರೀತಮ್ ಶೆಟ್ಟಿ, ಹೇಮಾವತಿ ಕೆ, ಆಶಾಲತಾ ಪ್ರಶಾಂತ್, ಸುಧೀರ್ ಜೈನ್, ಅರಿಹಂತ್ ಜೈನ್, ಅನುದೀಪ್ ಜೈನ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here