ಬೆಳ್ತಂಗಡಿ ಯಕ್ಷ ಬಳಗದಿಂದ ವೇಣೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಧನಸಹಾಯ ಹಸ್ತಾಂತರ

0

ವೇಣೂರು: ಯಕ್ಷ ಬಳಗ ಬೆಳ್ತಂಗಡಿ ಆಶ್ರಯದಲ್ಲಿ, ಯಕ್ಷ ಬಳಗ ವೇಣೂರು ಸಮಿತಿಯ ಸಹಕಾರದೊಂದಿಗೆ ಶ್ರೀ ಆದಿ ಧೂಮಾವತಿ ಶ್ರೀ ದೇಯಿಬೈದೆತಿ ಕೃಪಾ ಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿ ಇವರಿಂದ ವೇಣೂರು ಗಾರ್ಡನ್ ವ್ಯೂ ಕಾಂಪ್ಲೆಕ್ಸ್ ಬಳಿ ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟ ಹಾಗೂ ಯಕ್ಷಗಾನ ಕ್ಷೇತ್ರದ ಸಾಧಕರಿಗೆ ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಉಳಿಕೆ ಯಾದ ಮೊತ್ತವನ್ನು ಜೀರ್ಣೋದ್ಧಾರ ಗೊಳ್ಳುತ್ತಿರುವ ವೇಣೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಯಕ್ಷ ಬಳಗ ಬೆಳ್ತಂಗಡಿ ಸಮಿತಿಯ ಗೌರವ ಅಧ್ಯಕ್ಷರಾದ ರಕ್ಷಿತ್ ಶಿವರಾಂ ,ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಪುರುಷೋತ್ತಮ ರಾವ್ ಯಕ್ಷ ಬಳಗ ವೇಣೂರು ವಲಯ ಸಮಿತಿಯ ಗೌರವ ಸಲಹೆಗಾರರಾದ ಜಯರಾಮ್ ಶೆಟ್ಟಿ ,ಅಧ್ಯಕ್ಷರಾದ ರಮೇಶ್ ಪೂಜಾರಿ ಪಡ್ಡಾಯಿಮಜಲು,ಉಪಾಧ್ಯಕ್ಷರಾದ ಹರೀಶ್ ಪೊಕ್ಕಿ, ಕೊಶಾದಿಕಾರಿ ಸತೀಶ್ ಹೆಗ್ಡೆ,ಹಾಗೂ ಪ್ರಮುಖರಾದ ಬಿ.ಟಿ ಬಂಗೇರ ಬಡಕೋಡಿ , ಶಶಿದರ್ ಶೆಟ್ಟಿ ,ಅಶ್ವಿತ್ ಕುಮಾರ್ ಪಡ್ಡಾಯಿಮಜಲು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here