ಮಾಜಿ ಶಾಸಕ ಕೆ ವಸಂತ ಬಂಗೇರರ ವ್ಯಕ್ತಿತ್ವ ಚಿತ್ರಣ “ವಸಂತ ವಿನ್ಯಾಸ” ಪುಸ್ತಕವನ್ನು ಅನಾವರಣಗೊಳಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

0

ಬೆಳ್ತಂಗಡಿ: ಜೈ ಪ್ರಕಾಶನ ಸಂಸ್ಥೆ ಬೆಳ್ತಂಗಡಿ ಇದರ ವತಿಯಿಂದ ಹೊರತರಲಾದ ಮಾಜಿ ಶಾಸಕ ಕೆ ವಸಂತ ಬಂಗೇರ ಇವರ ವ್ಯಕ್ತಿತ್ವ ಚಿತ್ರಣ ವಸಂತ ವಿನ್ಯಾಸ ಪುಸ್ತಕದ ಅನಾವರಣ ಕಾರ್ಯಕ್ರಮವು ಡಿ.17ರಂದು ಬೆಳ್ತಂಗಡಿ ಶ್ರೀ ಗುರುದೇವ ಪ.ಪೂ ಕಾಲೇಜಿನ ಆವರಣದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೆರವೇರಿಸಿದರು.

ಮಾಜಿ ಶಾಸಕ ವೈ ಎಸ್ ವಿ ದತ್ತ ಪುಸ್ತಕ ಪರಿಚಯವನ್ನು ಮಾಡಿದರು. ಮುಖ್ಯ ಅಭ್ಯಾಗತರಾಗಿ ಬಂಟ್ವಾಳ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ.ತುಕರಾಮ ಪೂಜಾರಿ ಭಾಗಿಯಾಗಿದ್ದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಗೌರವ ಕಾರ್ಯದರ್ಶಿ ರಾಜೇಶ್ವರಿ ಚೇತನ್ ಶುಭಾಶಂಸನೆ ಹಾಗೂ ಲೇಖಕ ಅರವಿಂದ ಚೊಕ್ಕಾಡಿ ಪ್ರಾಸ್ತಾವಿಕ ಮಾತನಾಡಿದರು.

ಗೌರವಾರ್ಪಣೆ:

ಮಾಜಿ ಶಾಸಕ ವಸಂತ ಬಂಗೇರರಿಗೆ ಹಾಗೂ ಲೇಖಕರಿಗೆ ಗೌರವಾರ್ಪಣೆಯನ್ನು ಮಾಡಲಾಯಿತು. ನಂತರ ಕರಾಟೆ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಮಂಜುಳಾ ಡಿ ಪ್ರಸಾದ್ ಪ್ರಾರ್ಥನೆ ಮಾಡಿದರು. ಪುಸ್ತಕ ಅನಾವರಣ ಸಮಿತಿ, ಸ್ವಾಗತ ಸಮಿತಿ ಅಧ್ಯಕ್ಷರು ಪದ್ಮನಾಭ ಮಾಣೀಂಜ ಸ್ವಾಗತಿಸಿದರು. ಜೈಕನ್ನಡಮ್ಮ ವಾರಪತ್ರಿಕೆಯ ಸಂಪಾದಕರು ದೇವಿಪ್ರಸಾದ್ ಧನ್ಯವಾದ ಹಾಗೂ ನಿರೂಪಣೆ ಮಾಡಿದರು.

LEAVE A REPLY

Please enter your comment!
Please enter your name here