Site icon Suddi Belthangady

ಎಸ್ ಡಿ ಎಮ್ ಪಾಲಿಟೆಕ್ನಿಕ್ ಗೆ ರನ್ನರ್ ಅಪ್ ಬಹುಮಾನ

ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ನಡೆದ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಪಾಲಿಟೆಕ್ನಿಕ್ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ರನ್ನರ್ ಅಪ್ ಬಹುಮಾನ ಪಡೆದುಕೊಂಡಿದೆ ಸುಮಾರು ಜಿಲ್ಲೆಯ 14 ಪಾಲಿಟೆಕ್ನಿಕ್ ಕಾಲೇಜಿನ ತಂಡಗಳು ಈ ಪಂದ್ಯಾಟದಲ್ಲಿ ಭಾಗವಹಿಸಿದ್ದವು ಈ ಪಂದ್ಯಾಟದಲ್ಲಿ ಎಸ್ ಡಿ ಎಮ್ ಪಾಲಿಟೆಕ್ನಿಕ್ ನ ಭುವನೇಶ್ ಉತ್ತಮ ದಾಳಿಗರ ಪ್ರಶಸ್ತಿಯನ್ನು ಪಡೆದುಕೊಂಡರು ಇವರಿಗೆ ಕಾಲೇಜಿನ ದೈಹಿಕ ನಿರ್ದೇಶಕ ಏಕಲವ್ಯ ಪ್ರಶಸ್ತಿ ವಿಜೇತ ನಿತಿನ್ ಇವರು ತರಬೇತಿ ನೀಡಿದ್ದರು.

Exit mobile version