8 ವರ್ಷದ ಮನವಿಯನ್ನು ಕೇಳದ ಸರ್ಕಾರ, ವಿವಿಧ ಬೇಡಿಕೆಗಳ ಬಗ್ಗೆ ಗ್ರಾಮ ಪಂಚಾಯತ್ ಸಿಬ್ಬಂದಿಗಳಿಂದ ಬೆಳಗಾವಿ ಚಲೋ

0

ಬೆಳ್ತಂಗಡಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಡಿ.19 ರಿಂದ ಅನಿರ್ಧಿಷ್ಟಾವಧಿ ತನಕ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ ಆರ್ ಡಿಪಿಐಆರ್ ರಾಜ್ಯ ಸಮಿತಿಯಿಂದ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಯುತ್ತಿದೆ.

ಸಿ ಮತ್ತು ಡಿ ದರ್ಜೆ ಸ್ಥಾನಮಾನ ಸೇರಿದಂತೆ ಹಲವು ಬೇಡಿಕೆ ಈಡೇರಿಸುವಂತೆ ಗ್ರಾಮ ಪಂಚಾಯತ್ ನೌಕರರು ಕಳೆದ 8 ವರ್ಷಗಳಿಂದ ಮುಖ್ಯಮಂತ್ರಿ , ಸಚಿವರು ಹಾಗೂ ಸರಕಾರದ ಉನ್ನತ ಅಧಿಕಾರಿಗಳನ್ನು ಭೇಟಿ ಮಾಡಿ ಮನವಿ ಮಾಡುತ್ತಲೇ ಬರುತ್ತಿದ್ದಾರೆ. ಆದರೂ ಸರಕಾರದಿಂದ ಈ ವರೆಗೆ ಗ್ರಾ.ಪಂ ನೌಕರರ ಬೇಡಿಕೆಗಳಿಗೆ ಯಾವುದೇ ರೀತಿಯ ಸ್ಪಂದನೆ ದೊರೆತಿಲ್ಲ. ಹೀಗಾಗಿ ಡಿ.19 ರಿಂದ 30ರವರೆಗೆ ಬೆಳಗಾವಿಯ ಅಧಿವೇಶನದ ಸಂದರ್ಭದಲ್ಲಿ ಸರಕಾರದ ಚಳಿ ಬಿಡಿಸಲು ಮುಂದಾಗಿದ್ದಾರೆ.

ಬೆಳಗಾವಿಯಲ್ಲಿ ನಡೆಯುವ ಹೋರಾಟದಲ್ಲಿ ರಾಜ್ಯದ 5600ಕ್ಕೂ ಮಿಕ್ಕಿದ ಗ್ರಾ.ಪಂ ಗಳ ನೌಕರರೂ, ದ.ಕ ಜಿಲ್ಲೆಯ ಹಲವು ಗ್ರಾಮ ಪಂಚಾಯತ್ ಗಳ ನೌಕರರೂ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಈ ಮಧ್ಯೆ ಡಿ.19ರಿಂದ ಎನ್ ಪಿ ಎಸ್ ನೌಕರರ ಸಂಘವೂ ನಿಶ್ಚಿತ ಪಿಂಚಣಿಗಾಗಿ ಬೆಂಗಳೂರಿನ ಫ್ರೀಡಂ ನಲ್ಲಿ ಮಾಡು ಇಲ್ಲವೆ ಮಡಿ ಹೋರಾಟಕ್ಕೆ ಕರೆ ಕೊಟ್ಟಿದ್ದು ಇದರಲ್ಲಿ ಗ್ರಾಮ ಪಂಚಾಯತ್ ಗಳ ಬಹುತೇಕ ಪಿಡಿಒಗಳೂ ಭಾಗಿಯಾಗುತ್ತಿದ್ದಾರೆ.

LEAVE A REPLY

Please enter your comment!
Please enter your name here