ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಕಾರ್ಯಕ್ರಮಕ್ಕೆ ಬೆಳ್ತಂಗಡಿಯಿಂದ ಹೊರಡುವ ಹೊರೆಕಾಣಿಗೆ ಚಾಲನೆ ನೀಡಿದ ಶಾಸಕ ಹರೀಶ್ ಪೂಂಜ

0

ಉಜಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ವಿದ್ಯಾಗಿರಿ ಮೂಡಬಿದಿರೆಯಲ್ಲಿ ಡಿ.21 ರಂದು ಜರುಗುವ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಕಾರ್ಯಕ್ರಮಕ್ಕೆ ಡಿ.19ರಂದು ತಾಲೂಕಿನ ಎಲ್ಲಾ ಶಾಲೆ, ಗ್ರಾ.ಪಂ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ವತಿಯಿಂದ 100 ಕ್ವಿಂಟಾಲ್ ಅಕ್ಕಿ ಹಾಗೂ 1 ಲಕ್ಷ ತೆಂಗಿನ ಕಾಯಿಯನ್ನು ಹೊರೆಕಾಣಿಕೆಯಲ್ಲಿ ಬೆಳ್ತಂಗಡಿ ತಾಲೂಕಿನಿಂದ ಸಾಗಿಸಲಾಯಿತು.

ಹೊರೆಕಾಣಿಕೆಯನ್ನು ಶಾಸಕ ಹರೀಶ್ ಪೂಂಜ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ತಾಲೂಕು ಮುಖ್ಯಕಾರ್ಯನಿರ್ವಾಹಣಾಧಿಕಾರಿ ಕುಸುಮಾಧರ ಬಿ, ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಹೆಚ್ ಎಸ್, ಕೃಷಿ ಉತ್ಪನ್ನ ಮಾರುಕಟ್ಟೆ ಅಧಿಕಾರಿ ರವೀಂದ್ರ, ಭಾರತ್ ಸ್ಕೌಟ್ಸ್ ಆ್ಯಂಡ್ಸ್ ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಅಧ್ಯಕ್ಷರು ವಿಠಲ್ ಶೆಟ್ಟಿ, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಭುವನೇಶ್, ತಾಲೂಕಿನ ಎಲ್ಲಾ ಸಮೂಹ ಸಂಪನ್ಮೂಲ ವ್ಯಕ್ತಿಗಳು, ಮಾಜಿ ತಾಲೂಕು ಪಂ ಸದಸ್ಯ ಜೋಯೆಲ್ ಮೆಂಟೋನ್ಸಾ, ನವೀನ್ ನೆರಿಯ, ಸುಬ್ರಹ್ಮಣ್ಯ ಅಗರ್ತ ಮೊದಲಾದವರು ಉಪಸ್ಥಿತರಿದ್ದರು.

ಧರಣೇಂದ್ರ ಕೆ ಜೈನ್ ಸ್ವಾಗತಿಸಿದರು.

LEAVE A REPLY

Please enter your comment!
Please enter your name here