ಲಾಯಿಲ: ಬೈಕ್ ಮತ್ತು ಕೆ.ಎಸ್.ಆರ್.ಟಿ.ಸಿ ನಡುವೆ ಭೀಕರ ರಸ್ತೆ ಅಪಘಾತ, ಓರ್ವ ಸಾವು, ಮತ್ತೊಬ್ಬರಿಗೆ ಗಂಭೀರ

0

ಬೆಳ್ತಂಗಡಿ: ಲಾಯಿಲ ಕೊಯ್ಯುರು ಕ್ರಾಸ್ ತಿರುವು ರಸ್ತೆಯಲ್ಲಿ ಬೈಕ್ ಮತ್ತು ಕೆ‌.ಎಸ್.ಆರ್.ಟಿ.ಸಿ ಬಸ್ಸ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಒರ್ವ ಸ್ಥಳದಲ್ಲಿ ಸಾವಿಗೀಡಾಗಿದ್ದು ಮತ್ತೋಬ್ಬರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಉಜಿರೆಯ ಖಾಸಾಗಿ ಕಂಪೆನಿಯಲ್ಲಿ ಕೆಲಸ ಮುಗಿಸಿ ತನ್ನ ಪಲ್ಸರ್ ಬೈಕ್ ನಲ್ಲಿ ಬೆಳ್ತಂಗಡಿ ಕಡೆ ಬರುತ್ತಿದ್ದ ವಿಜಯ್ ಮತ್ತು ಶೈಲು ಅವರಿಗೆ ಬೆಳ್ತಂಗಡಿಯಿಂದ ಧರ್ಮಸ್ಥಳ ಕಡೆ ಸಂಚರಿಸುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ. ಬೈಕ್ನಲ್ಲಿದ್ದ ವಿಜಯ್ ಸಾವನ್ನಪ್ಪಿದ್ದು ಶೈಲು ಅವರಿಗೆ ಗಂಭೀರ ಗಾಯಗಳಾಗಿದೆ. ಇಗಾಗಲೇ ಸ್ಥಳಕ್ಕೆ ಪೋಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here