ವೇಣೂರು: ನಮ್ಮ ಸಂಸ್ಕೃತಿ ಸ್ವಚ್ಚ ಸಂಸ್ಕೃತಿ ಕಾರ್ಯಕ್ರಮಕ್ಕೆ ಶಾಸಕ ಹರೀಶ್ ಪೂಂಜರಿಂದ ಚಾಲನೆ: ಆಳ್ವಾಸ್ ನಲ್ಲಿ ನಡೆಯುತ್ತಿರುವ ವಿಶ್ವ ಸಾಂಸ್ಕೃತಿಕ ಜಂಬೂರಿ ಅಂಗವಾಗಿ ಜಿಲ್ಲೆಯ 200 ಕಿ.ಮೀ ರಸ್ತೆ ಇಕ್ಕೆಲಗಳು ಸ್ವಚ್ಚ

0

ವೇಣೂರು: ಆಳ್ವಾಸ್ ಶಿಕ್ಷಣ ಸಂಸ್ಥೆ ಮೂಡಬಿದಿರೆಯಲ್ಲಿ ನಡೆಯುತ್ತಿರುವ ಭಾರತೀಯ ಸ್ಕೌಟ್ಸ್ ಮತ್ತು ಗೈಡ್ಸ್ ನ ವಿಶ್ವ ಸಾಂಸ್ಕೃತಿಕ ಜಂಬೂರಿಯ ಆಂಗವಾಗಿ ಜಿಲ್ಲೆಯ ಸುಮಾರು 200 ಕಿಲೋಮೀಟರ್ ರಸ್ತೆಯ ಇಕ್ಕೆಲಳನ್ನು ಸ್ವಚ್ಚಗೊಳಿಸಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ” ನಮ್ಮ ಸಂಸ್ಕೃತಿ ಸ್ವಚ್ಚ ಸಂಸ್ಕೃತಿ ಎನ್ನುವ ಕಾರ್ಯಕ್ರಮಕ್ಕೆ ಶಾಸಕ ಹರೀಶ್ ಪೂಂಜರವರು ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಿಂದ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ತಾ.ಪಂ ಮುಖ್ಯಕಾರ್ಯನಿರ್ಹಣಾಧಿಕಾರಿ ಕುಸುಮಧರ, ವೇಣೂರು ಗ್ರಾ.ಪಂ ಅಧ್ಯಕ್ಷ ನೇಮಯ್ಯ ಕುಲಾಲ್,ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್,ವೇಣೂರು ಸಿ.ಎ ಬ್ಯಾಂಕ್ ಅಧ್ಯಕ್ಷ ಸುಂದರ ಹೆಗ್ಡೆ,ವೇಣೂರು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪುರುಷೋತ್ತಮ ರಾವ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here