Site icon Suddi Belthangady

ಉಜಿರೆ ಶ್ರೀ ಧ. ಮ. ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ನೆನಪಿನಂಗಳ ಕಾರ್ಯಕ್ರಮ


ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಯತ್ತ ) ಇದರ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಕಾಲೇಜಿನ ಹಿರಿಯ ವಿದ್ಯಾರ್ಥಿಯೊಂದಿಗೆ ಸಂವಾದ ಕಾರ್ಯಕ್ರಮ ಸರಣಿ ಎಸ್ ಡಿ ಎಂ ನೆನಪಿನ0ಗಳ ಡಿ.23 ರಂದು ಇಂದ್ರಪ್ರಸ್ತದಲ್ಲಿ ನಡೆಯಿತು.

ಮಂಗಳೂರು ವಿಶ್ವ ವಿದ್ಯಾಲಯದ ಕುಲಪತಿ ಪಿ. ಸುಬ್ರಹ್ಮಣ್ಯ ಎಡಪಡಿತ್ತಾಯ ದೀಪ ಬೆಳಗಿ ಉದ್ಘಾಟನೆ ಮಾಡಿ ಶುಭ ಹಾರೈಸಿದರು. ಕಾಲೇಜು ಪ್ರಾಂಶುಪಾಲ ಡಾ. ಎ. ಜಯಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ವಿದ್ಯಾರ್ಥಿ ಸಂಘದ ಉಜಿರೆ ವಲಯದ ಅಧ್ಯಕ್ಷ ನಿವೃತ್ತ ಎಸ್. ಪಿ. ಪೀತಾಂಬಾರ ಹೇರಾಜೆ, ಕಾರ್ಯದರ್ಶಿ ವಕೀಲ ಬಿ. ಕೆ. ಧನಂಜಯ ರಾವ್, ಪ್ರೊ. ಶೈಲೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಉಪನ್ಯಾಸಕರು, ಕಾಲೇಜು ಹಿರಿಯ ವಿದ್ಯಾರ್ಥಿಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ಉಪನ್ಯಾಸಕ ಕುಮಾರ ಹೆಗ್ಡೆ ನಿರೂಪಿಸಿ, ಡಾ. ಮಾಧವ ಪರಿಚಯಿಸಿದರು. ಈ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿ ವರುಣ್ ರವರಿಗೆ ಪ್ರೋತ್ಸಾಹಧನ ನೀಡಿ ಗೌರವಿಸಲಾಯಿತು.

Exit mobile version