ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ಜಾತ್ರೆಗೆ ಚಾಲನೆ, ಹೊರೆಕಾಣಿಕೆ ಸಮರ್ಪಣೆ

0


ಬೆಳಾಲು :ಇಲ್ಲಿಯ ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಪ್ರಯುಕ್ತ ಡಿ.25 ರಂದು ಊರ ಭಕ್ತರಿಂದ ಬೆಳಾಲು ಪೇಟೆಯಿಂದ ಭವ್ಯ ಮೆರವಣಿಗೆಯೊಂದಿಗೆ ಹಸಿರು ಹೊರೆ ಕಾಣಿಕೆ ಸಮರ್ಪಣೆ ನಡೆಯಿತು.

ಬೆಳಿಗ್ಗೆ ತಂತ್ರಿಗಳ ಸ್ವಾಗತ, ದೇವತಾ ಪ್ರಾರ್ಥನೆ, ಗಣಪತಿ ಹೋಮ, ತೋರಣ ಮುಹೂರ್ತ, ಶ್ರೀ ಅನಂತೇಶ್ವರ ಭಜನಾ ಮಂಡಳಿ ಸದಸ್ಯರಿಂದ ಭಜನೆ, ದೇವರಿಗೆ ಪಂಚಾಮೃತ ಅಭಿಷೇಕ, ಪವಮಾನ ಅಭಿಷೇಕ, ಪ್ರಸನ್ನ ಪೂಜೆ, ನಾಗ ದೇವರಿಗೆ ಕಳಶಭಿಷೇಕ, ಪರಿವಾರ ದೈವಗಳಿಗೆ ಕಳಶಾಭಿಷೇಕ, ಪರ್ವ ತಂಬಿಲ, ಮಹಾಪೂಜೆ, ಅನ್ನ ಸಂತರ್ಪಣೆ ನಡೆಯಿತು.ಬಳಿಕ ಶ್ರೀ ಸ್ಕಂದ ಸ್ವಸಹಾಯ ಬ್ರಾಹ್ಮಣ ಸಂಘ ಬೆಳಾಲು ಇವರು ಸೇವಾ ಕರ್ತರಾಗಿ ಊರ ಯತ್ವಿಜರಿಂದ ಶ್ರೀ ಮಹಾ ವಿಷ್ಣುಯಾಗ, ಸಂಜೆ ರಂಗ ಪೂಜೆ, ದೇವರ ಬಲಿ ಹೊರಟು ಭೂತಬಲಿ ಉತ್ಸವ, ವಸಂತ ಕಟ್ಟೆ ಪೂಜೆ, ಮಹಾ ಪೂಜೆ ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here