Site icon Suddi Belthangady

ಬೆಳಾಲು ಶ್ರೀ ಧ ಮ ಪ್ರೌಢಶಾಲೆಯ ನೆನಪಿನ ಸಂಚಿಕೆ ಬಿಡುಗಡೆ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ವಾರ್ಷಿಕ ಪ್ರತಿಭಾ ದಿನಾಚರಣೆಯ ಸಂದರ್ಭದಲ್ಲಿ ಮಕ್ಕಳಿಂದ ರಚಿತವಾದ “ನವ್ಯಜ್ಯೋತಿ” ಹಸ್ತಪ್ರತಿ ವಾರ್ಷಿಕ ನೆನಪಿನ ಸಂಚಿಕೆಯು ಬಿಡುಗಡೆಗೊಂಡಿತು.

ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರಾದ ಬೆಳಾಲು ತಿಮ್ಮಪ್ಪ ಗೌಡರು ಸಂಚಿಕೆಯನ್ನು ಬಿಡುಗಡೆಗೊಳಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಸುಲೈಮಾನ್ ಭೀಮಂಡೆ, ಹಳೆ ವಿದ್ಯಾರ್ಥಿ ಮತ್ತು ದೊಂಪದಪಲ್ಕೆ ಶಾಲೆಯ ಮುಖ್ಯೋಪಾಧ್ಯಾಯರಾದ ಸುರೇಶ್ ಮಾಚಾರ್ , ಸಂಚಿಕೆಯು ಸಂಪಾದಕರಾದ ಶಿಕ್ಷಕ ಸುಮನ್ ಯು ಎಸ್ ರವರು, ಶಿಕ್ಷಕರು, ಸಂಚಿಕೆಯ ಸಂಪಾದನಾ ಮಂಡಳಿಯ ವಿದ್ಯಾರ್ಥಿ ಪ್ರತಿನಿಧಿಗಳು ಹಾಗೂ ಊರ ಗಣ್ಯರು ಮೊದಲಾದವರು ಉಪಸ್ಥಿತರಿದ್ದರು.

Exit mobile version