ಓಡಿಲ್ನಾಳ ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ನವೀಕರಣ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಧಾರ್ಮಿಕ ಕಾರ್ಯಕ್ರಮ

0

ಬೆಳ್ತಂಗಡಿ : ಓಡಿಲ್ನಾಳ ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ನವೀಕರಣ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಧಾರ್ಮಿಕ ಕಾರ್ಯಕ್ರಮವನ್ನು ಡಿ.25ರಂದು ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಡಾ! ಎಂ. ಹರ್ಷಸಂಪಿಗೆತ್ತಾಯ ಉದ್ಘಾಟಿಸಿ ಶುಭ ಹಾರೈಸಿದರು.

ಚಿತ್ರದುರ್ಗ ಮಠದ ಪ್ರೇಮಾ ಪೂಜ್ಯ ಶ್ರೀ ಶ್ರೀ ಶ್ರೀ ಬಸವಮೂರ್ತಿ ಮಾದರ ಚನ್ನಯ್ಯ ಸ್ವಾಮೀಜಿ ಆಶೀರ್ವಚನ ನೀಡಿದರು. ಧಾರ್ಮಿಕ ಉಪನ್ಯಾಸ ವನ್ನು ವಾಣಿ ಪದವಿ ಪೂರ್ವ ಕಾಲೇಜ್ ಪ್ರಾಂಶುಪಾಲ ಡಿ.ಯದುಪತಿ ಗೌಡ ನೀಡಿದರು. ಮುಖ್ಯ ಅತಿಥಿಗಳಾಗಿ ದ.ಕ .ಜಿ.ಧಾರ್ಮಿಕ ಪರಿಷತ್ ಸದಸ್ಯರಾದ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಬ್ರಹ್ಮ ಕಲಶೋತ್ಸವ ಸಮಿತಿಯ ಅಧ್ಯಕ್ಷ ಹರೀಶ್ ಪೂಂಜ, ಗುರುವಾಯನಕೆರೆ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಭಗಿರಥ ಜಿ, ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಜಯಂತ್ ಕೋಟ್ಯಾನ್, ಓಡಿಲ್ನಾಳ ಧರ್ಮೋ ತ್ಥಾನ ಟ್ರಸ್ಟ್ ಅಧ್ಯಕ್ಷ
ವ್ರಷಭ ಆರಿಗ, ಬ್ರಹ್ಮ ಕಲಶೋತ್ಸವ ಕಾರ್ಯಾಧ್ಯಕ್ಷ ರಾಜ್ ಪ್ರಕಾಶ್ ಶೆಟ್ಟಿ, ಉಪಸ್ಥಿತಿಯಿದ್ದರು.

ಬ್ರಹ್ಮ ಕಲಶೋತ್ಸವ ಪ್ರಧಾನ ಕಾರ್ಯದರ್ಶಿ ಧರಣೀಂದ್ರ ಜೈನ್ ಸ್ವಾಗತಿಸಿ. ಪ್ರಜ್ಞಾ ಓಡಿಲ್ನಾಳ ಕಾರ್ಯಕ್ರಮ ನಿರೂಪಿಸಿ.ಬ್ರಹ್ಮ ಕಲಸಶೋತ್ಸವದ ಕೋಶಾಧಿಕಾರಿ ಮನೋಹರ್ ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here