Site icon Suddi Belthangady

ಮೊಗ್ರು: ಮೀನು ಹಿಡಿಯಲು ಹೋದ ವ್ಯಕ್ತಿ ಜನಾರ್ಧನರ ಶವ ಪತ್ತೆ: ಸಾವಿನ ಬಗ್ಗೆ ಅನುಮಾನ

ಮೊಗ್ರು: ಮುಗೇರಡ್ಕ ನೇತ್ರಾವತಿ ನದಿಯ ಪಂಪ್ ಹೌಸ್ ಬಳಿ ಬಲೆ ಬಿಟ್ಟು ಮೀನು ಹಿಡಿಯಲು ಹೋದ ಯುವಕ ನೀರು ಪಾಲಾದ ಘಟನೆ ಡಿ.26 ರಂದು ಸಂಜೆ ನಡೆದಿದ್ದು, ಮೃತದೇಹ ಇಂದು ಪತ್ತೆಯಾಗಿದೆ.ನೀರು ಪಾಲಾದ ಯುವಕ ಮೊಗ್ರು ಗ್ರಾಮದ ದಂಡುಗ ನಿವಾಸಿ ಗುಮ್ಮಣ್ಣ ಗೌಡರ ವಿವಾಹಿತ ಪುತ್ರ ಜನಾರ್ಧನ ಗೌಡ (42) ಎಂದು ತಿಳಿದುಬಂದಿದೆ.

ಜನಾರ್ಧನ ಹಾಗೂ ಬೋಲೋಡಿ ನಿವಾಸಿ ಮಹೇಶ್ ಎಂಬವರು ನೇತ್ರಾವತಿ ನದಿಯಲ್ಲಿ ಮೀನು ಹಿಡಿಯಲು ಬಂದಿದ್ದರು. ಈ ವೇಳೆ ಜನಾರ್ಧನ ಅವರು ನೀರು ಪಾಲಾಗಿದ್ದಾರೆ . ಆದರೆ ಜೊತೆಗಿದ್ದ ಈತನ ಸ್ನೇಹಿತ ಮಹೇಶ್ ಅಲ್ಲಿಂದ ಪರಾರಿಯಾಗಿದ್ದ ಎನ್ನಲಾಗಿದೆ. ನೀರಿಗೆ ಬಿದ್ದ ಮಾಹಿತಿ ತಡವಾಗಿ ಬೆಳಕಿಗೆ ಬಂದಿದೆ. ವಿಷಯ ತಿಳಿದ ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ಆರಂಭಿಸಿದ್ದರು. ಇಂದು ಮುಂಜಾನೆ ಮೃತದೇಹ ಪತ್ತೆಯಾಗಿದೆ. ನೀರು ಪಾಲಾದ ಯುವಕನ ಕೈ ಕಾಲುಗಳು ಗಾಯಗಳಾಗಿದ್ದು, ಸಾವಿನ ಸುತ್ತ ಸ್ಥಳೀಯರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಇನ್ನೂ ಹೆಚ್ಚಿನ ಮಾಹಿತಿ ಪೊಲೀಸರಿಂದ ಲಭ್ಯವಾಗಬೇಕಾಗಿದೆ.

Exit mobile version