Site icon Suddi Belthangady

ಗ್ರಾಮೀಣ ಉತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಅಳದಂಗಡಿ : ಆಮಂತ್ರಣ ಹಾಗೂ ಶ್ರಮಿಕ ಸೇವಾ ಟ್ರಸ್ಟ್ (ರಿ). ಬೆಳ್ತಂಗಡಿ ಮತ್ತು ಕರ್ನಾಟಕ ಜಾನಪದ ಪರಿಷದ್ ದ.ಕ , ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ನಾವರ ಇವರ ನೇತೃತ್ವದಲ್ಲಿ ಜನವರಿ 4 ರಂದು ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಗ್ರಾಮೀಣ ಉತ್ಸವ ನಡೆಯಲಿದೆ.

ಸಮಾರಂಭದ ಅಮಂತ್ರಣ ಪತ್ರಿಕೆಯನ್ನು ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜಾ ಅವರು ಬಿಡುಗಡೆ ಗೊಳಿಸಿದರು. ಈ ಸಂದರ್ಭದಲ್ಲಿ ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್, ರಾಜಶೇಖರ ಶೆಟ್ಟಿ ಅಳದಂಗಡಿ, ಅಳದಂಗಡಿ ಗ್ರಾ.ಪಂ.ಉಪಾಧ್ಯಕ್ಷ ಹರೀಶ್ ಆಚಾರ್ಯ, ಸದಸ್ಯ ಕೃಷ್ಣಪ್ಪ ಪೂಜಾರಿ, ಸುಪ್ರೀತ್ ಜೈನ್ ಅಳದಂಗಡಿ, ಗಣೇಶ್ ದೇವಾಡಿಗ, ಮೋಹನ್ ಎ.ದಾಸ್ ಅಳದಂಗಡಿ, ಮಂಜುನಾಥ ಆಚಾರ್ಯ, ಬೂಬ ಮೂಲ್ಯ ಉಪಸ್ಥಿತರಿದ್ದರು.

ಕಾರ್ಯಕ್ರಮ ಸುಲ್ಕೇರಿ ಮತ್ತು ಅಳದಂಗಡಿ ಗ್ರಾಮ ಪಂಚಾಯತು, ಲಯನ್ಸ್ ಕ್ಲಬ್ ಬೆಳ್ತಂಗಡಿ ಮತ್ತು ಸುಲ್ಕೇರಿ, ಮಂಜುಶ್ರೀ ಜೇಸಿ ಸಂಸ್ಥೆ ಬೆಳ್ತಂಗಡಿ, ಪ್ರಗತಿ ಬಂಧು ಒಕ್ಕೂಟ ಅಳದಂಗಡಿ ವಲಯ,ಹಾಲು ಉತ್ಪಾದಕರ ಸಹಕಾರಿ ಸಂಘ ಸುಲ್ಕೇರಿ, ಶ್ರೀ ಶಾರದೋತ್ಸವ ಸೇವಾ ಸಮಿತಿ ನಾವರ ಮತ್ತು ಸದ್ಧರ್ಮ ಯುವಕ ಮಂಡಲ ಕುದ್ಯಾಡಿ, ಶುವನಾಗ ಫ್ರೆಂಡ್ಸ್ ಕುದ್ಯಾಡಿ ಕಾರ್ಯಕ್ರಮಕ್ಕೆ ಸಹಕಾರ ನೀಡಲಿದ್ದಾರೆ.

Exit mobile version