ಜ.1: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೂತನ 27ನೇ ಶಾಖೆ ಮಡಂತ್ಯಾರಿನಲ್ಲಿ ಉದ್ಘಾಟನೆ

0

ಮಡಂತ್ಯಾರು : ಜಿಲ್ಲಾ ರಾಜ್ಯೋತ್ಸವ, ರಾಜ್ಯ ಪ್ರಶಸ್ತಿ ಪುರಸ್ಕಾರ ಪಡೆದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೂತನ 27ನೇ ಶಾಖೆಯ ಉದ್ಘಾಟನೆಯು ಜ.1 ರಂದು ನೆಲಮಹಡಿ, ಶ್ರೀ ದುರ್ಗಾ ಕಾಂಪ್ಲೆಕ್ಸ್ (ಆಶೀರ್ವಾದ್ ಹಾಲ್) ಮಡಂತ್ಯಾರಿನಲ್ಲಿ ನಡೆಯಲಿದೆ.
ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಲಿದ್ದಾರೆ. ಮಾಜಿ ಶಾಸಕ ಕೆ. ವಸಂತ ಬಂಗೇರ ದೀಪ ಪ್ರಜ್ವಲನೆಗೊಳಿಸಲಿದ್ದಾರೆ. ಅಧ್ಯಕ್ಷತೆಯನ್ನು ಮಂಗಳೂರು ಆತ್ಮಶಕ್ತಿ ವಿವಿಧೋzಶ ಸಹಕಾರಿ ಸಂಘ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ತು ಸದಸ್ಯ ಪ್ರತಾಪ್ ಸಿಂಹ ನಾಯಕ್, ಮಾಲಾಡಿ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಬೇಬಿ ಸುಸ್ಸಾನಾ, ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋzಶ ಸಹಕಾರಿ ಸಂಘ ಅಧ್ಯಕ್ಷ ಪದ್ಮನಾಭ ಮಾಣಿಂಜ, ಮಡಂತ್ಯಾರು ವರ್ತಕರ ಸಂಘ ಅಧ್ಯಕ್ಷ ಜಯಂತ್ ಶೆಟ್ಟಿ, ಕೊರಿಂಜ ಪಂಚಲಿಂಗೇಶ್ವರ ದೇವಸ್ಥಾನ ಆಡಳಿತ ಮೊಕ್ತೇಸರ ಯೋಗೀಶ್ ಪೂಜಾರಿ ಕಡ್ತಿಲ ,ಮಡಂತ್ಯಾರು ಗ್ರಾ.ಪಂ. ಸದಸ್ಯ ವಿಶ್ವನಾಥ್ ಪೂಜಾರಿ, ಸಿವಿಲ್ ಕಾಂಟ್ರ್ಯಾಕ್ಟರ್ ಪ್ರಶಾಂತ್ ಎಂ. ಪ್ರತಿಮಾ ನಿಲಯ ಪಾರೆಂಕಿ, ಮಡಂತ್ಯಾರು ಎಮ್.ಆರ್. ಸುಪಾರಿ ಮಾಲಕ ಬಿ. ಹೈದರ್,ಕಟ್ಟಡ ಮಾಲಕ ಎಮ್. ತಿಮ್ಮಪ್ಪ ಗೌಡ ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here