Site icon Suddi Belthangady

ಬೆಳಾಲು ಪ್ರೌಢಶಾಲೆಯಲ್ಲಿ ಉಪನ್ಯಾಸ ಕಾರ್ಯಕ್ರಮ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಶ್ರೀ ಧ. ಮ. ಕಾಲೇಜಿನ ವತಿಯಿಂದ ಆರ್ಥಿಕ ನಿರ್ವಹಣೆ ವಿಷಯದಲ್ಲಿ ಎಂಟು, ಒಂಬತ್ತು ಮತ್ತು ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರತ್ಯಪ್ರತ್ಯೇಕವಾಗಿ ಉಪನ್ಯಾಸ ಕಾರ್ಯಕ್ರಮ ಜರುಗಿತು.

ಉಪನ್ಯಾಸಕರಾಗಿ ಕಾಲೇಜಿನ ಉಪನ್ಯಾಸಕರಾದ ಲಕ್ಷ್ಮೀನಾರಾಯಣ ಕೆ ಎಸ್, ಹರೀಶ್ ಶೆಟ್ಟಿ ಮತ್ತು ಅಕ್ಷತಾ ಎ. ಇವರಿಂದ ನಡೆಯಿತು. ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್, ಶಿಕ್ಷಕರಾದ ಶ್ರೀಮತಿ ರಾಜಶ್ರೀ , ಜಗದೀಶ್ ಎನ್. ಮತ್ತು ಸುಮನ್ ಯು.ಎಸ್.ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Exit mobile version