ರಾಜ್ಯ ಪಂ. ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಜಿಲ್ಲಾ ಘಟಕದ ಅಧ್ಯಕ್ಷರಾಗಿ ವೇಣೂರು ಗ್ರಾ.ಪಂಚಾಯತ್ ನ ನಾಗೇಶ್ ಎಂ. ಆಯ್ಕೆ

0


ವೇಣೂರು: ಮಂಗಳೂರಿನ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಡಿ. 30ರ೦ದು ನಡೆದ ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ದ.ಕ. ಜಿಲ್ಲಾ ಘಟಕದ 2023-2025ರ ಸಾಲಿನ ನೂತನ ಅಧ್ಯಕ್ಷರಾಗಿ ವೇಣೂರು ಗ್ರಾ.ಪಂ.ನ ಅಭಿವೃದ್ಧಿ ಅಧಿಕಾರಿ ನಾಗೇಶ್ ಎಂ. ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಬಂಟ್ವಾಳ ಸಜಿಪ ಮುನ್ನೂರು ಗ್ರಾ.ಪಂ.ನ ಪಿಡಿಒ ಲಕ್ಷ್ಮಣ್ ಹೆಚ್. ಕೆ., ಖಜಾಂಜಿಯಾಗಿ ಕೋಟ ಶ್ರೀನಿವಾಸ ಪೂಜಾರಿಯವರ ಆಪ್ತ ಸಹಾಯಕ ಪರಮೇಶ್ವರ್, ರಾಜ್ಯ ಪರಿಷತ್ ಆಗಿ ಉಳ್ಳಾಲದ ಬೆಳ್ಮ ಗ್ರಾ.ಪಂ.ನ ಪಿಡಿಒ ರಮೇಶ್ ನಾಯ್ಕ್ ಚುನಾವಣೆ ಮೂಲಕ ಬಹುಮತಗಳಿಂದ ಆಯ್ಕೆಯಾಗಿದ್ದಾರೆ.

ಉಳಿದಂತೆ ಅವಿರೋಧವಾಗಿ ರೋಹಿಣಿ ಕೊಳ್ನಾಡು ಉಪಾಧ್ಯಕ್ಷೆಯಾಗಿ, ಸಂಘಟನಾ ಕಾರ್ಯದರ್ಶಿಯಾಗಿ ಅವಿನಾಶ್ ಬಿ.ಆರ್. ಒಳಮೊಗ್ರು ಪುತ್ತೂರು, ಸಂಘಟನಾ ಕಾರ್ಯದರ್ಶಿಯಾಗಿ ಸಂಧ್ಯಾ ಅಶೋಕ್ ಬಾಳ್ತಿಲ, ಕ್ರೀಡಾ ಕಾರ್ಯದರ್ಶಿಯಾಗಿ ಕೃಷ್ಣ ನಾಯಕ್ ಅಡ್ಯಾರು ಹಾಗೂ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ನಿಡ್ಪಳ್ಳಿಯ ಸಂಧ್ಯಾ ಲಕ್ಷ್ಮೀ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here