Site icon Suddi Belthangady

ಮಡಂತ್ಯಾರಿನಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 27ನೇ ಶಾಖೆ ಶುಭಾರಂಭ

ಮಡಂತ್ಯಾರು : ತನ್ನ 10ನೇ ವರ್ಷದ ಸಂಭ್ರಮದಲ್ಲಿರುವ ಮಂಗಳೂರಿನ ಪಡೀಲ್ ನಲ್ಲಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ತನ್ನ 27ನೇ ಶಾಖೆ ಮಡಂತ್ಯಾರು ಶ್ರೀ ದುರ್ಗಾ ಕಾಂಪ್ಲೆಕ್ಸ್ (ಆಶೀರ್ವಾದ್ ಹಾಲ್) ನ ಕಟ್ಟಡ ದಲ್ಲಿ ಜ.1ರಂದು ಶುಭಾರಂಭಗೊಂಡಿತು.

ಮಾಜಿ ಶಾಸಕರಾದ ಕೆ. ವಸಂತ ಬಂಗೇರ ಉದ್ಘಾಟಿಸಿ ಶುಭ ಹಾರೈಸಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆ ವಹಿಸಿದ್ದರು., ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಗಣಕೀಕರಣ ಉದ್ಘಾಟಿಸಿದರು.

ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುಸ್ಸಾನ, ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಮಾನಿಂಜ, ವರ್ತಕರ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ, ಕೊರಿಂಜ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಯೋಗೀಶ್ ಪೂಜಾರಿ ಕಡ್ತಿಲ, ಮಡಂತ್ಯಾರು ಗ್ರಾಮ ಪಂಚಾಯತ್ ಸದಸ್ಯ ವಿಶ್ವನಾಥ್ ಪೂಜಾರಿ, ಪ್ರಶಾಂತ್ ಎಂ ಪ್ರತಿಮಾ ನಿಲಯ, ಎಂ ಆರ್ ಸುಪಾರಿ ಮಾಲಕ ಬಿ. ಹೈದರ್, ಕಟ್ಟಡ ಮಾಲಕ ಎಂ. ತಿಮ್ಮಪ್ಪ ಗೌಡ, ಸಹಕಾರಿ ಸಂಘದ ಉಪಾಧ್ಯಕ್ಷ ನೇಮಿರಾಜ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಶಾಖಾಧಿಕಾರಿ ಕು. ಸುರಕ್ಷಾ,ನಿರ್ದೇಶಕರಾದ, ಪರಮೇಶ್ವರ್ ಪೂಜಾರಿ, ಆನಂದ ಎಸ್, ಕೊಂಡಾಣ, ಸೀತಾರಾಮ್ ಎನ್. ರಮಾನಾಥ ಸನಿಲ್, ಚಂದ್ರಹಾಸ್ ಮರೋಳಿ, ಮುದ್ದು ಮೂಡುಬೆಳ್ಳೆ, ಗೋಪಾಲ್ ಎಂ. ದಿವಾಕರ್ ಬಿ. ಪಿ. ಶ್ರಿಮತಿ ಚಂದ್ರಾವತಿ, ಶ್ರಿಮತಿ ಉಮಾವತಿ, ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಶೀಪ್ರಭಾ, ಗೆಜ್ಜೆ ಗಿರಿ ಅಧ್ಯಕ್ಷ ಪೀತಾಂಬರ ಹೇರಾಜೆ, ಗುರುದೇವಾ ವಿವಿಧೋದ್ದೇಶ ಸಹಕಾರಿ ಸಂಘದ ವಿಶೇಶ ಅಧಿಕಾರಿ ಮೋನಪ್ಪ ಪೂಜಾರಿ ಕಂಡೆಂತ್ಯಾರ್, ವಿಶ್ವನಾಥ್ ಕರಂದೂರು, ಅಬ್ದುಲ್ ಲತೀಫ್ ಸಾಹೇಬ್, ಮೂರ್ತೆದಾರ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ, ಮಡಂತ್ಯಾರು ಗ್ರಾಮ ಪಂಚಾಯತ್ ಸದಸ್ಯ ಕಿಶೋರ್ ಕುಮಾರ್ ಶೆಟ್ಟಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಟ್ರಸ್ಟ್ ಅಧ್ಯಕ್ಷ ವಾಮನ್ ಕೆ. ಸಮಾಜ ಕಲ್ಯಾಣ ಅಧಿಕಾರ ಶೇಷಗಿರಿ, ಮಡಂತ್ಯಾರು ಜೇಸಿಐ ಅಧ್ಯಕ್ಷ ಅಶೋಕ್ ಗುಂಡಿಯಲ್ಕೇ,ಮೊದಲಾದವರು ಉಪಸ್ಥಿತರಿದ್ದರು.

Exit mobile version