ಅಳದಂಗಡಿ: ಹಿಂಸಾತ್ಮಕವಾಗಿ ಗೋ ಸಾಗಾಟ ಮಾಡುತ್ತಿದ್ದ ಐವರ ಬಂಧನ,

0

ಅಳದಂಗಡಿ : ಅಳದಂಗಡಿ ಸಮೀಪ ಒಮ್ನಿ ಕಾರಿನಲ್ಲಿ ಅಕ್ರಮವಾಗಿ ಗೋಸಾಗಾಟ ನಡೆಸುತ್ತಿದ್ದ ಪ್ರಕರಣವೊಂದನ್ನು ಜ.4 (ಇಂದು) ಬೆಳಗ್ಗಿನ ಜಾವ ವೇಣೂರು ಪೊಲೀಸರು ಪತ್ತೆ ಹಚ್ಚಿದ್ದು ಐವರು ಆರೋಪಿಗಳನ್ನು ಬಂಧಿಸಿ ಐದು ಜಾನುವಾರುಗಳನ್ನು ಹಾಗೂ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಮಿಂಚಿನ ದಾಳಿ ನಡೆಸಿ 5 ಗೋವುಗಳನ್ನು ರಕ್ಷಿಸಿದ ಪೊಲೀಸರನ್ನು ಸಾರ್ವಜನಿಕರು ಮುಖ್ತ ಕಂಠದಿಂದ ಪ್ರಶಂಸಿದ್ದಾರೆ.

ಬಂಧಿತ ಆರೋಪಿಗಳು ಕರಾಯ, ಉಪ್ಪಿನಂಗಡಿ ನಿವಾಸಿಗಳಾದ ತೌಸೀಫ್, ಪುತ್ತಿಲ ನಿವಾಸಿ ಉಸ್ಮಾನ್, ಉಪ್ಪಿನಂಗಡಿ ವಳಾಲು ನಿವಾಸಿ ಇಕ್ಬಾಲ್ , ಕರಾಯ ನಿವಾಸಿ ಇರ್ಫಾನ್,ಕರಾಯ ನಿವಾಸಿ ಅನಸ್ ಎಂಬವರಾಗಿದ್ದಾರೆ.

ಅಳದಂಗಡಿ ಪರಿಸರದಲ್ಲಿ ಗೋ ಸಾಗಾಟ ಮಾಡುತ್ತಿದ್ದ ಬಗ್ಗೆ ಹಲವಾರು ದೂರುಗಳಿದ್ದು ಈ ಬಗ್ಗೆ ವೇಣೂರು ಎಸ್.ಐ. ಸೌಮ್ಯ,ಎ.ಎಸ್.ಐ ವೆಂಕಟೇಶ್,ಸಿಬ್ಬಂದಿಗಳಾದ ಅಭಿಜಿತ್, ಪ್ರಶಾಂತ್, ರಾಜೇಶ್, ಸಚಿನ್, ಹನುಮಂತ್, ತ್ರಿಮೂರ್ತಿ ಹಾಗೂ ತಂಡ ರಾತ್ರಿಯ ಗಸ್ತು ತಿರುಗುತ್ತಿದ್ದ ವೇಳೆ ಅನುಮಾನಾಸ್ಪದವಾಗಿ ದ್ವಿಚಕ್ರ ವಾಹನದಲ್ಲಿ ಬಂದವರನ್ನು ವಿಚಾರಿಸಿದ್ದು, ಈ ವೇಳೆ ಅವರು ಹಾಗೂ ಇತರರು ಸೇರಿ ಅಕ್ರಮ ಗೋ ಸಾಗಾಟ ನಡೆಸುತ್ತಿರುವ ವಿಚಾರ ತಿಳಿದಿದ್ದು ,ಈ ಹಿನ್ನೆಲೆಯಲ್ಲಿ ಓಮ್ನಿ ಕಾರನ್ನು ತಡೆದು ಪರಿಶೀಲಿಸಿದಾಗ ಕಾರಿನಲ್ಲಿ ಐದು ಜಾನುವಾರುಗಳನ್ನು ಅತ್ಯಂತ ಹಿಂಸಾತ್ಮಕವಾಗಿ ತುಂಬಿ ಸಾಗಾಟ ಮಾಡುತ್ತಿರುವುದು ಕಂಡು ಬಂದಿದೆ. ಕೂಡಲೇ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಓಮ್ನಿಯಲ್ಲಿ ಕೈ ಕಾಲುಗಳನ್ನು ಕಟ್ಟಿ ಅತ್ಯಂತ ಹಿಂಸಾತ್ಮಕ ಸಾಗಾಟ ಮಾಡುತ್ತಿದ್ದರು ಎನ್ನಲಾಗಿದೆ.

ವಶಪಡಿಸಿಕೊಂಡಿರುವ ಒಟ್ಟು ಸೊತ್ತುಗಳ ಮೌಲ್ಯ 1,90,000 ಎಂದು ಅಂದಾಜಿಸಲಾಗಿದ್ದು ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here