ಬಿಲ್ಲವ ಜನಪದ ಸಮ್ಮೇಳನ “ಜೀಟಿಗೆ” ಆಮಂತ್ರಣ ಪತ್ರಿಕೆ ಬಿಡುಗಡೆ

0

ಬೆಳ್ತಂಗಡಿ :ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ, ಯುವ ಬಿಲ್ಲವ ವೇದಿಕೆ ,ಮಹಿಳಾ ಬಿಲ್ಲವ ವೇದಿಕೆ ಹಾಗೂ ಯುವವಾಹಿನಿ ಬೆಳ್ತಂಗಡಿ ಮತ್ತು ವೇಣೂರು ಘಟಕದ ಸಹಕಾರದೊಂದಿಗೆ ಜ. 22 ರಂದು ಬೆಳ್ತಂಗಡಿ ಯಲ್ಲಿ ನಡೆಯಲಿರುವ ಬಿಲ್ಲವ ಜನಪದ ಸಮ್ಮೇಳನ -2023 “ಜೀಟಿಗೆ” ಸತ್ಯೊದ ತುಡರ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯ ಬಿಡುಗಡೆಯನ್ನು ಜ.4 ರಂದು ಸಂಘದ ಸಭಾ ಭವನದಲ್ಲಿ ಶ್ರೀ ಗುರುದೇವ ವಿವಿದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್. ಪದ್ಮನಾಭ ಮಾಣಿಂಜ ನೆರವೇರಿಸಿದರು.

ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಮಾಜಿ ಶಾಸಕ ಕೆ ವಸಂತ ಬಂಗೇರ, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರು, ಸಮ್ಮೇಳನದ ಪ್ರಧಾನ ಸಂಚಾಲಕ ಸಂಪತ್ ಬಿ. ಸುವರ್ಣ, ಶ್ರೀ ಕ್ಷೇತ್ರ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಪಿತಾಂಬರ ಹೇರಾಜೆ, ಸಂಘದ ಮಾಜಿ ಅಧ್ಯಕ್ಷರುಗಳಾದ ಪಿ. ಕೆ. ರಾಜು ಪೂಜಾರಿ, ಯೋಗೀಶ್ ಕುಮಾರ್, ಜಯರಾಮ ಬಂಗೇರ ಹೇರಾಜೆ, ಸಂಘದ ಉಪಾಧ್ಯಕ್ಷ ಶೇಖರ ಬಂಗೇರ, ಕಾರ್ಯದರ್ಶಿ ಜಯವಿಕ್ರಂ ಕಲ್ಲಾಪು, ಜೊತೆ ಕಾರ್ಯದರ್ಶಿ ರಾಜೀವ್ ಸಾಲಿಯಾನ್ ಹಾಗೂ ನಿರ್ದೇಶಕರು, ಮಹಿಳಾ ಬಿಲ್ಲವ ವೇದಿಕೆಯ ಮಾಜಿ ಅಧ್ಯಕ್ಷೆ ರಾಜಶ್ರೀ ರಮಣ್, ಕಾರ್ಯದರ್ಶಿ ಶಾಂಭಾವಿ ಬಂಗೇರ, ಸಮಾಜ ಬಾಂಧವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here